ಬ್ರೇಕಿಂಗ್ ನ್ಯೂಸ್
03-07-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ಮೇಲೆ ಮತ್ತೊಂದು ಕಾರು ಹರಿದು ಅವರು ದುರಂತ ಅಂತ್ಯಕಂಡ ಘಟನೆ ಇಂದು ಬೆಳಗಿನ ಜಾವ ದೇವನಹಳ್ಳಿ ಹೈವೇಯ ಚಿಕ್ಕಜಾಲ ಬಳಿ ನಡೆದಿದೆ. ರಾತ್ರಿ ಪಾಳೆಯದಲ್ಲಿ ಕರ್ತವ್ಯದಲ್ಲಿದ್ದ ಸುರೇಶ್ ಮೃತರೆಂದು ತಿಳಿದುಬಂದಿದೆ.
ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೇ ಗೌಡ ಮತ್ತು ಅವರ ಜೀಪ್ ಚಾಲಕ ಸುರೇಶ್ ಚಿಕ್ಕಜಾಲ ಬಳಿ ಬಂದಾಗ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಕಂಡು ಪರಿಶೀಲನೆಗೆ ಮುಂದಾಗಿದ್ದಾರೆ. ಕಾನ್ಸ್ಟೆಬಲ್ ಸುರೇಶ್ ಜೀಪ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಸಮಯಕ್ಕೆ ವೇಗವಾಗಿ ಬಂದ ಇನ್ನೊಂದು ಕಾರು ಸುರೇಶ್ ಅವರಿಗೆ ಡಿಕ್ಕಿಯಾಗಿದೆ. ಬಳಿಕ ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೂ ಗುದ್ದಿದೆ. ಪರಿಣಾಮ ಸುರೇಶ್ ಮೃತಪಟ್ಟಿದ್ದಾರೆ. ಇನ್ಸ್ಪೆಕ್ಟರ್ಗೆ ಫೋನ್ ಕಾಲ್ ಬಂದಿದ್ದು ಮಾತನಾಡಲು ಕೊಂಚ ರಸ್ತೆಬದಿಗೆ ತೆರಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಿಂತಿದ್ದ ಕಾರಿನಲ್ಲಿ ಕುಳಿತಿದ್ದ ಚಾಲಕನ ಕೈಕಾಲುಗಳಿಗೂ ಗಂಭೀರ ಗಾಯಗಳಾಗಿವೆ.
ಅಪಘಾತವೆಸಗಿದ ಕಾರಿನಲ್ಲಿ ಮೂವರು ಯುವಕರು, ಮೂವರು ಯುವತಿಯರಿದ್ದರು. ಅವರಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯನಿರತ ಪೊಲೀಸ್ ಕಾನ್ಸ್ಟೆಬಲ್ ಸುರೇಶ್ ದುರ್ಮರಣಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈವೇಗಳಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಲೈಟಿಂಗ್ ಬ್ಯಾಟರ್ನ್, ರಿಫ್ಲೆಕ್ಟ್ ಜಾಕೆಟ್ ಬಳಸಬೇಕು. ಈ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
In a tragic incident, a police constable, who was inspecting a parked vehicle on Bengaluru International Airport Road, was killed after being hit by a speeding car. The incident happened late on Sunday night. The deceased cop has been identified as Suresh, attached to Devanahalli police station.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm