ಬ್ರೇಕಿಂಗ್ ನ್ಯೂಸ್
03-07-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ಮೇಲೆ ಮತ್ತೊಂದು ಕಾರು ಹರಿದು ಅವರು ದುರಂತ ಅಂತ್ಯಕಂಡ ಘಟನೆ ಇಂದು ಬೆಳಗಿನ ಜಾವ ದೇವನಹಳ್ಳಿ ಹೈವೇಯ ಚಿಕ್ಕಜಾಲ ಬಳಿ ನಡೆದಿದೆ. ರಾತ್ರಿ ಪಾಳೆಯದಲ್ಲಿ ಕರ್ತವ್ಯದಲ್ಲಿದ್ದ ಸುರೇಶ್ ಮೃತರೆಂದು ತಿಳಿದುಬಂದಿದೆ.
ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೇ ಗೌಡ ಮತ್ತು ಅವರ ಜೀಪ್ ಚಾಲಕ ಸುರೇಶ್ ಚಿಕ್ಕಜಾಲ ಬಳಿ ಬಂದಾಗ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಕಂಡು ಪರಿಶೀಲನೆಗೆ ಮುಂದಾಗಿದ್ದಾರೆ. ಕಾನ್ಸ್ಟೆಬಲ್ ಸುರೇಶ್ ಜೀಪ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಸಮಯಕ್ಕೆ ವೇಗವಾಗಿ ಬಂದ ಇನ್ನೊಂದು ಕಾರು ಸುರೇಶ್ ಅವರಿಗೆ ಡಿಕ್ಕಿಯಾಗಿದೆ. ಬಳಿಕ ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೂ ಗುದ್ದಿದೆ. ಪರಿಣಾಮ ಸುರೇಶ್ ಮೃತಪಟ್ಟಿದ್ದಾರೆ. ಇನ್ಸ್ಪೆಕ್ಟರ್ಗೆ ಫೋನ್ ಕಾಲ್ ಬಂದಿದ್ದು ಮಾತನಾಡಲು ಕೊಂಚ ರಸ್ತೆಬದಿಗೆ ತೆರಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಿಂತಿದ್ದ ಕಾರಿನಲ್ಲಿ ಕುಳಿತಿದ್ದ ಚಾಲಕನ ಕೈಕಾಲುಗಳಿಗೂ ಗಂಭೀರ ಗಾಯಗಳಾಗಿವೆ.
ಅಪಘಾತವೆಸಗಿದ ಕಾರಿನಲ್ಲಿ ಮೂವರು ಯುವಕರು, ಮೂವರು ಯುವತಿಯರಿದ್ದರು. ಅವರಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯನಿರತ ಪೊಲೀಸ್ ಕಾನ್ಸ್ಟೆಬಲ್ ಸುರೇಶ್ ದುರ್ಮರಣಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈವೇಗಳಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಲೈಟಿಂಗ್ ಬ್ಯಾಟರ್ನ್, ರಿಫ್ಲೆಕ್ಟ್ ಜಾಕೆಟ್ ಬಳಸಬೇಕು. ಈ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
In a tragic incident, a police constable, who was inspecting a parked vehicle on Bengaluru International Airport Road, was killed after being hit by a speeding car. The incident happened late on Sunday night. The deceased cop has been identified as Suresh, attached to Devanahalli police station.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm