ಬ್ರೇಕಿಂಗ್ ನ್ಯೂಸ್
03-07-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ಮೇಲೆ ಮತ್ತೊಂದು ಕಾರು ಹರಿದು ಅವರು ದುರಂತ ಅಂತ್ಯಕಂಡ ಘಟನೆ ಇಂದು ಬೆಳಗಿನ ಜಾವ ದೇವನಹಳ್ಳಿ ಹೈವೇಯ ಚಿಕ್ಕಜಾಲ ಬಳಿ ನಡೆದಿದೆ. ರಾತ್ರಿ ಪಾಳೆಯದಲ್ಲಿ ಕರ್ತವ್ಯದಲ್ಲಿದ್ದ ಸುರೇಶ್ ಮೃತರೆಂದು ತಿಳಿದುಬಂದಿದೆ.
ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೇ ಗೌಡ ಮತ್ತು ಅವರ ಜೀಪ್ ಚಾಲಕ ಸುರೇಶ್ ಚಿಕ್ಕಜಾಲ ಬಳಿ ಬಂದಾಗ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಕಂಡು ಪರಿಶೀಲನೆಗೆ ಮುಂದಾಗಿದ್ದಾರೆ. ಕಾನ್ಸ್ಟೆಬಲ್ ಸುರೇಶ್ ಜೀಪ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಸಮಯಕ್ಕೆ ವೇಗವಾಗಿ ಬಂದ ಇನ್ನೊಂದು ಕಾರು ಸುರೇಶ್ ಅವರಿಗೆ ಡಿಕ್ಕಿಯಾಗಿದೆ. ಬಳಿಕ ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೂ ಗುದ್ದಿದೆ. ಪರಿಣಾಮ ಸುರೇಶ್ ಮೃತಪಟ್ಟಿದ್ದಾರೆ. ಇನ್ಸ್ಪೆಕ್ಟರ್ಗೆ ಫೋನ್ ಕಾಲ್ ಬಂದಿದ್ದು ಮಾತನಾಡಲು ಕೊಂಚ ರಸ್ತೆಬದಿಗೆ ತೆರಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಿಂತಿದ್ದ ಕಾರಿನಲ್ಲಿ ಕುಳಿತಿದ್ದ ಚಾಲಕನ ಕೈಕಾಲುಗಳಿಗೂ ಗಂಭೀರ ಗಾಯಗಳಾಗಿವೆ.
ಅಪಘಾತವೆಸಗಿದ ಕಾರಿನಲ್ಲಿ ಮೂವರು ಯುವಕರು, ಮೂವರು ಯುವತಿಯರಿದ್ದರು. ಅವರಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯನಿರತ ಪೊಲೀಸ್ ಕಾನ್ಸ್ಟೆಬಲ್ ಸುರೇಶ್ ದುರ್ಮರಣಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈವೇಗಳಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಲೈಟಿಂಗ್ ಬ್ಯಾಟರ್ನ್, ರಿಫ್ಲೆಕ್ಟ್ ಜಾಕೆಟ್ ಬಳಸಬೇಕು. ಈ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
In a tragic incident, a police constable, who was inspecting a parked vehicle on Bengaluru International Airport Road, was killed after being hit by a speeding car. The incident happened late on Sunday night. The deceased cop has been identified as Suresh, attached to Devanahalli police station.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm