ಬ್ರೇಕಿಂಗ್ ನ್ಯೂಸ್
03-07-23 09:51 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ನನ್ನ ಕಾರಿನ ಮೇಲೆ ಕಾಗೆ ಕುಳಿತ ಬಳಿಕವೂ ಎರಡು ಬಜೆಟ್ ಮಂಡಿಸಿ ಅಧಿಕಾರ ಪೂರ್ತಿಯಾಗಿ, ಸಮರ್ಥವಾಗಿ ನಿರ್ವಹಿಸಿದೆ. ಈಗ ಮತ್ತೆ ಸಿಎಂ ಆಗಿದ್ದೇನೆ. ಆದ್ದರಿಂದ ಮೌಡ್ಯವನ್ನು ನಂಬಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು ಮೌಡ್ಯ ಪರಂಪರೆ ವಿರುದ್ಧ ಹೋರಾಡಿದ್ದನ್ನು ವಿವರಿಸುವ ಸಂದರ್ಭದಲ್ಲಿ ಈ ಹಿಂದೆನನ್ನ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗವನ್ನು ಸಿಎಂ ಸ್ಮರಿಸಿದರು.
ಮೌಢ್ಯದ ಕಾಗೆ ;
" ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಟಿವಿಗಳಲ್ಲಿ ಭಯಂಕರ ಚರ್ಚೆ ನಡೆಯಿತು. ಒಬ್ಬರು ನಾನು ಬಜೆಟ್ ಮಂಡಿಸಲ್ಲ ಕುರ್ಚಿ ಕಳ್ಕೊತೀನಿ ಎಂದರೆ, ಇನ್ನೊಬ್ಬರು ಬಜೆಟ್ ಮಂಡಿಸಿದ ಮೇಲೆ ಅಧಿಕಾರ ಕಳ್ಕೊತಾರೆ ಎಂದೆಲ್ಲಾ ಹೇಳಿದರು. ಆದರೆ, ಕಾಗೆ ಹಾರಿಹೋಯ್ತು. ಮೌಡ್ಯದ ಕಾಗೆ ಹಾರಿಸಿದವರೂ ನಾಪತ್ತೆ ಆದ್ರು " ಎಂದು ತಮ್ಮ ಅನುಭವದ ಮೂಲಕವೇ ವಿವರಿಸಿದರು.
ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಇಲ್ಲದೆ ಹಿಂದುಳಿದ ಶೋಷಿತ ಸಮುದಾಯಗಳಿಗೆ ಆರ್ಥಿಕ, ಶೈಕ್ಷಣಿಕ ಚಲನೆ ಸಿಗುವುದಿಲ್ಲ. ಹೀಗಾಗಿ, ಬುದ್ದ, ಬಸವಾದಿ ಶರಣರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತಿ ಮುಕ್ತ ಸಮಾಜ ಇರಬೇಕು ಎಂದು ಆಶಿಸಿದ್ದರು.
Even after the crow sat on my car, I presented two budgets and managed it efficiently. I am CM again. So don't believe Maudya said CM Siddaramaiah.Department of Kannada and Culture, Urban District Administration Rabindra Kala Kshetra, Shiv Sharan Shri Hadapada who was present at the inauguration spoke. While explaining the struggle of Basavadi soldiers against the Maudya legacy, the CM recalled the incident where a crow sat on my car earlier.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm