ನನ್ನ ಕಾರಿನ ಮೇಲೆ ಕಾಗೆ ಕುಳಿತ ಬಳಿಕವೂ ಎರಡು ಬಜೆಟ್ ಮಂಡಿಸಿದ್ದೇನೆ, ಈಗ ಮತ್ತೆ ಸಿಎಂ ಆಗಿದ್ದೇನೆ ; ಮೌಡ್ಯದ ಕಾಗೆ ಹಾರಿಸಿದವರೂ ನಾಪತ್ತೆ !

03-07-23 09:51 pm       Bangalore Correspondent   ಕರ್ನಾಟಕ

ನನ್ನ ಕಾರಿನ ಮೇಲೆ ಕಾಗೆ ಕುಳಿತ ಬಳಿಕವೂ ಎರಡು ಬಜೆಟ್ ಮಂಡಿಸಿ ಅಧಿಕಾರ ಪೂರ್ತಿಯಾಗಿ, ಸಮರ್ಥವಾಗಿ ನಿರ್ವಹಿಸಿದೆ. ಈಗ ಮತ್ತೆ ಸಿಎಂ ಆಗಿದ್ದೇನೆ. ಆದ್ದರಿಂದ ಮೌಡ್ಯವನ್ನು ನಂಬಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು, ಜುಲೈ 3: ನನ್ನ ಕಾರಿನ ಮೇಲೆ ಕಾಗೆ ಕುಳಿತ ಬಳಿಕವೂ ಎರಡು ಬಜೆಟ್ ಮಂಡಿಸಿ ಅಧಿಕಾರ ಪೂರ್ತಿಯಾಗಿ, ಸಮರ್ಥವಾಗಿ ನಿರ್ವಹಿಸಿದೆ. ಈಗ ಮತ್ತೆ ಸಿಎಂ ಆಗಿದ್ದೇನೆ. ಆದ್ದರಿಂದ ಮೌಡ್ಯವನ್ನು ನಂಬಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು ಮೌಡ್ಯ ಪರಂಪರೆ ವಿರುದ್ಧ ಹೋರಾಡಿದ್ದನ್ನು ವಿವರಿಸುವ ಸಂದರ್ಭದಲ್ಲಿ ಈ ಹಿಂದೆನನ್ನ ಕಾರಿನ ಮೇಲೆ ಕಾಗೆ ಕುಳಿತ ಪ್ರಸಂಗವನ್ನು ಸಿಎಂ ಸ್ಮರಿಸಿದರು.

ಮೌಢ್ಯದ ಕಾಗೆ ;

" ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಟಿವಿಗಳಲ್ಲಿ ಭಯಂಕರ ಚರ್ಚೆ ನಡೆಯಿತು. ಒಬ್ಬರು ನಾನು ಬಜೆಟ್ ಮಂಡಿಸಲ್ಲ ಕುರ್ಚಿ ಕಳ್ಕೊತೀನಿ ಎಂದರೆ, ಇನ್ನೊಬ್ಬರು ಬಜೆಟ್ ಮಂಡಿಸಿದ ಮೇಲೆ ಅಧಿಕಾರ ಕಳ್ಕೊತಾರೆ ಎಂದೆಲ್ಲಾ ಹೇಳಿದರು. ಆದರೆ, ಕಾಗೆ ಹಾರಿಹೋಯ್ತು. ಮೌಡ್ಯದ ಕಾಗೆ ಹಾರಿಸಿದವರೂ ನಾಪತ್ತೆ ಆದ್ರು " ಎಂದು ತಮ್ಮ ಅನುಭವದ ಮೂಲಕವೇ ವಿವರಿಸಿದರು.

ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಇಲ್ಲದೆ ಹಿಂದುಳಿದ ಶೋಷಿತ ಸಮುದಾಯಗಳಿಗೆ ಆರ್ಥಿಕ, ಶೈಕ್ಷಣಿಕ ಚಲನೆ ಸಿಗುವುದಿಲ್ಲ. ಹೀಗಾಗಿ, ಬುದ್ದ, ಬಸವಾದಿ ಶರಣರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾತಿ ಮುಕ್ತ ಸಮಾಜ ಇರಬೇಕು ಎಂದು ಆಶಿಸಿದ್ದರು.

 Even after the crow sat on my car, I presented two budgets and managed it efficiently. I am CM again. So don't believe Maudya said CM Siddaramaiah.Department of Kannada and Culture, Urban District Administration Rabindra Kala Kshetra, Shiv Sharan Shri Hadapada who was present at the inauguration spoke. While explaining the struggle of Basavadi soldiers against the Maudya legacy, the CM recalled the incident where a crow sat on my car earlier.