ಬ್ರೇಕಿಂಗ್ ನ್ಯೂಸ್
07-07-23 03:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು.ಟಿ.ಖಾದರ್ ತುಳು ಭಾಷೆಯಲ್ಲಿ ಗದರಿದ ಪ್ರಸಂಗ ನಡೆಯಿತು. ಗುರುವಾರ ಸಂಜೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಅಬ್ಬರಿಸಿದ್ದಾರೆ.
ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಹೇಳಿ ಹೇಳಿ ಸಾಕಾಗಿ, ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ 'ಆಯಗ್ ಒರ ಪನ್ಲೆಯಾ..' (ಅವರಿಗೊಂದು ಹೇಳಿಯಪ್ಪಾ..) ಎಂದು ಹೇಳಿದ್ದಾರೆ. ತುಳು ಭಾಷೆ ಅರ್ಥವಾಗದ ಯತ್ನಾಳ್ ಇದರಿಂದ ಸಿಡಿಮಿಡಿಗೊಂಡು, ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಏಪ್ ಮಾಡಿಕೊಡಿ ಎಂದು ಕಿಚಾಯಿಸಿದ್ದಾರೆ. ಕನ್ನಡದ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಸ್ಪೀಕರ್ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ ಎಂದು ಹೇಳಿದರು.
ಈ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿ, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ. ನಮಗೆ ನಿಮ್ಮ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಆಪ್ ಹಾಕಿಕೊಡಿ. ಅವಾಗ ನಮಗೆ ಅರ್ಥ ಆಗುತ್ತದೆ ಎಂದು ಕಾಲೆಳೆದರು. ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಮಾಡಿ ಎಂದು ಕಾಲೆಳೆದರು.
Speaker #UTKhader slams Basangouda Patil #Yatnal in #Tulu, #video goes viral pic.twitter.com/2gIri7JoDW
— Headline Karnataka (@hknewsonline) July 7, 2023
Speaker UT Khader slams Basangouda Patil Yatnal in Tulu, video goes viral.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am