ಬ್ರೇಕಿಂಗ್ ನ್ಯೂಸ್
07-07-23 03:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು.ಟಿ.ಖಾದರ್ ತುಳು ಭಾಷೆಯಲ್ಲಿ ಗದರಿದ ಪ್ರಸಂಗ ನಡೆಯಿತು. ಗುರುವಾರ ಸಂಜೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಅಬ್ಬರಿಸಿದ್ದಾರೆ.
ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಹೇಳಿ ಹೇಳಿ ಸಾಕಾಗಿ, ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ 'ಆಯಗ್ ಒರ ಪನ್ಲೆಯಾ..' (ಅವರಿಗೊಂದು ಹೇಳಿಯಪ್ಪಾ..) ಎಂದು ಹೇಳಿದ್ದಾರೆ. ತುಳು ಭಾಷೆ ಅರ್ಥವಾಗದ ಯತ್ನಾಳ್ ಇದರಿಂದ ಸಿಡಿಮಿಡಿಗೊಂಡು, ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಏಪ್ ಮಾಡಿಕೊಡಿ ಎಂದು ಕಿಚಾಯಿಸಿದ್ದಾರೆ. ಕನ್ನಡದ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಸ್ಪೀಕರ್ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ ಎಂದು ಹೇಳಿದರು.
ಈ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿ, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ. ನಮಗೆ ನಿಮ್ಮ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಆಪ್ ಹಾಕಿಕೊಡಿ. ಅವಾಗ ನಮಗೆ ಅರ್ಥ ಆಗುತ್ತದೆ ಎಂದು ಕಾಲೆಳೆದರು. ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಮಾಡಿ ಎಂದು ಕಾಲೆಳೆದರು.
Speaker #UTKhader slams Basangouda Patil #Yatnal in #Tulu, #video goes viral pic.twitter.com/2gIri7JoDW
— Headline Karnataka (@hknewsonline) July 7, 2023
Speaker UT Khader slams Basangouda Patil Yatnal in Tulu, video goes viral.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm