ಬ್ರೇಕಿಂಗ್ ನ್ಯೂಸ್
07-07-23 09:12 pm HK News Desk ಕರ್ನಾಟಕ
ಕಲಬುರ್ಗಿ, ಜುಲೈ 7: ಪ್ರಧಾನಿ ವಿರುದ್ಧದ ನಿಂದನೆಯನ್ನು ಕೇವಲ ಅವಹೇಳನ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು, ದೇಶದ್ರೋಹ ಎಂದು ಹೇಳಲು ಆಗುವುದಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
ಈ ಸಂಬಂಧ ಕಲಬುರ್ಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್ ಅವರ ಏಕಸದಸ್ಯ ನ್ಯಾಯಪೀಠ ಬೀದರಿನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಈ ಅಭಿಪ್ರಾಯ ಪಟ್ಟಿದೆ.
ಬೀದರ್ ನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್ ಅಬ್ದುಲ್ ಖಾಲಿದ್, ಮೊಹಮ್ಮದ್ ಬಿಲಾಲ್ ಇನಾಂದರ್, ಮೊಹ್ಮದ್ ಮೆತಾಬ್ ವಿರುದ್ಧ ಪೊಲೀಸರು ಸೆಕ್ಷನ್ 153(ಎ) ಅಡಿ ದಾಖಲಿಸಿದ ಆರೋಪಗಳು ದೇಶದ್ರೋಹಕ್ಕೆ ಸಮವಾದುದೆಂದು ಕಂಡುಬರುತ್ತಿಲ್ಲ ಎಂಬುದಾಗಿ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೆ, ಶಾಲಾಡಳಿತ ಮಂಡಳಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ.
ಆದರೆ, ದೇಶದ ಪ್ರಧಾನಿ ಸ್ಥಾನದಲ್ಲಿ ಇರುವವರನ್ನು ಚಪ್ಪಲಿಯಿಂದ ಹೊಡೆಯಬೇಕು ಎಂದು ಹೇಳಿರುವುದು ಬೇಜವಾಬ್ದಾರಿ ಮತ್ತು ಅವಹೇಳನಕಾರಿಯಾಗುತ್ತದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಹಾಗೂ ಸರ್ಕಾರದಲ್ಲಿರುವ ವ್ಯಕ್ತಿಯನ್ನು ಟೀಕಿಸುವುದು ಸಹಜವಾಗಿದೆ. ಇದೇ ಕಾರಣಕ್ಕೆ ಮುಸ್ಲಿಮರು ದೇಶಬಿಟ್ಟು ಹೋಗಿ ಎಂದು ಹೇಳುವುದು ಸರಿಯಲ್ಲ ಎಂಬುದಾಗಿ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್ ಅಭಿಪ್ರಾಯ ಪಟ್ಟಿದ್ದಾರೆ.
ಇದಲ್ಲದೆ, ಪ್ರಧಾನಿ ನಿಂದಿಸಿದ ಘಟನೆ ಶಾಲೆಯ ಆವರಣದಲ್ಲಿ ನಡೆದಿದೆ ಹೊರತು, ಮಕ್ಕಳು ಹೇಳುವ ಘೋಷಣೆಗಳು ಪ್ರಚೋದನೆಯಿಂದ ಆಗಿದ್ದಲ್ಲ. ಈ ಕಾರಣಕ್ಕೆ ಸಮಾಜದಲ್ಲಿ ಕೋಮುಗಲಭೆ ಸಂಭವಿಸುತ್ತದೆ ಎಂದು ಬಿಂಬಿಸುವುದು ಕ್ರೌರ್ಯವಾಗಿದೆ ಎಂದು ಕೋರ್ಟ್ ಹೇಳಿದೆ.
The school management had petitioned the court to quash an FIR registered by local activist Neelesh Rakshyal in 2020. The petition alleged that a school play which was critical of Prime Minister Narendra Modi as well as the Citizenship (Amendment) Act (CAA) and the National Register of Citizens (NRC) was posted on social media to create religious enmity and that it was an anti-national act. The FIR had been registered under IPC sections pertaining to sedition and provocation.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm