ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.

ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm