ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.
ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm