ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.

ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm