ಬ್ರೇಕಿಂಗ್ ನ್ಯೂಸ್
10-07-23 02:14 pm HK News Desk ಕರ್ನಾಟಕ
ಹುಬ್ಬಳ್ಳಿ, ಜುಲೈ 10: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಮುಂದೆ ಈ ರೀತಿಯ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುವುದು. ತನಿಖೆಯನ್ನು ಪೊಲೀಸರು ಸಮರ್ಥವಾಗಿ ನಿರ್ವಹಿಸುತ್ತಿದ್ದು ಸಿಬಿಐಗೆ ನೀಡುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದದ ಅವರು, ಈ ಪ್ರಕರಣದಲ್ಲಿ ಯಾವುದೇ ರಾಜಕೀಯ, ತಾರತಮ್ಯ ಮಾಡುವುದಿಲ್ಲ. ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.
ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದು ಸ್ವಾಭಾವಿಕ ಪದ್ದತಿ, ಇದರಲ್ಲಿ ತಾರತಮ್ಯ ಪ್ರಶ್ನೆ ಇಲ್ಲ. ಘಟನೆ ಆದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ವರೂರಲ್ಲಿ ಜೈನ ಮುನಿಗಳು ಉಪವಾಸ ಕುಳಿತಿದ್ದಾರೆ. ಅವರ ಬೇಡಿಕೆಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.
ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ಶುರುವಾಗಿದೆ. ಈ ಹಂತದಲ್ಲಿ ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯ ಇಲ್ಲ. ಗೃಹ ಇಲಾಖೆಯೇ ಸಮರ್ಥವಾಗಿದೆ. ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದರು.
ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ, ನಮ್ಮ ವಿರುದ್ಧ ಅಪವಾದ ಹೊರಿಸುವ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ಅವರಲ್ಲಿ ಆಂತರಿಕ ಒಳ ಜಗಳ ಇದೆ. ಅವರಿಗೆ ಎಷ್ಟರ ಮಟ್ಟಿಗೆ ಜವಾಬ್ದಾರಿ ಇದೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು.
After the murder of Sri Acharya Kamakumara Nandi, a Jain monk, Karnataka Home Minister Dr. G. Parameshwara on Monday said that the government will ensure that no such incidents happen again in the state. The opposition BJP not satisfied with the probe has decided to protest.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm