ಬ್ರೇಕಿಂಗ್ ನ್ಯೂಸ್
12-07-23 12:21 pm HK News Desk ಕರ್ನಾಟಕ
ಮಂಡ್ಯ, ಜುಲೈ 12: ಮಂಗಳೂರಿನಲ್ಲಿ ಜಿಪಂ ಸಿಇಓ, ಅಪರ ಜಿಲ್ಲಾಧಿಕಾರಿ ಆಗಿ ಸರಳ ವ್ಯಕ್ತಿತ್ವ ಮತ್ತು ಕರ್ತವ್ಯ ದಕ್ಷತೆಯಿಂದ ಹೆಸರು ಮಾಡಿದ್ದ ಡಾ.ಕುಮಾರ್ ಇದೀಗ ಮಂಡ್ಯದಲ್ಲಿ ಜಿಲ್ಲಾಧಿಕಾರಿಯಾಗಿಯೂ ಜನಪರ ಕೆಲಸದಿಂದ ಗಮನ ಸೆಳೆದಿದ್ದಾರೆ. ನಾಗಮಂಗಲ ತಾಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಜಿಲ್ಲಾಧಿಕಾರಿ, ಅಲ್ಲಿ ಪ್ಲೇಟ್ ಊಟಕ್ಕೆ ದುಬಾರಿ ದರ ಕೀಳುತ್ತಿದ್ದುದನ್ನು ನೋಡಿ ಶಾಕ್ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ, ಸಾಂಬಾರ್ ಅಥವಾ ಒಂದು ಪ್ಲೇಟ್ ಅನ್ನ ಸಾಂಬರ್ಗೆ 92 ರು. ಬಿಲ್ ಮಾಡುತ್ತಿರುವುದನ್ನು ಕಂಡ ಜಿಲ್ಲಾಧಿಕಾರಿ, ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಕುಂದು ಕೊರತೆಗಳ ಬಗ್ಗೆ ಹೊರರೋಗಿಗಳು ಮತ್ತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾಗಲೇ ಒಳರೋಗಿಗಳಿಗೆ ನೀಡುತ್ತಿರುವ ಊಟದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಆಸ್ಪತ್ರೆಯ ವಾರ್ಡ್ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ, ಒಳರೋಗಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ, ಆಡಳಿತದ ಖರ್ಚು-ವೆಚ್ಚಗಳ ಕಡತ ಪರಿಶೀಲನೆ ನಡೆಸಿದರು. ಈ ವೇಳೆ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ ಸಾಂಬರ್ ಅಥವಾ ಒಂದು ಪ್ಲೇಟ್ ಅನ್ನ ಸಾಂಬರ್ಗೆ 92 ರೂ., ಒಂದು ಬಾಳೆ ಹಣ್ಣಿಗೆ 8 ರು. ಹಾಗೂ ಒಂದು ಮೊಟ್ಟೆಗೆ 10 ರೂ ಬಿಲ್ ಮಾಡುತ್ತಿರುವುದನ್ನು ಕಂಡು ಕಿಡಿಯಾದರು.
ಖಾಸಗಿ ಹೋಟೆಲ್ಗಳಲ್ಲೇ ಕನಿಷ್ಠ 40 ರಿಂದ 60 ರು.ಗೆ ಮುದ್ದೆ, ಚಪಾತಿ, ಅನ್ನ ಸಾಂಬರ್, ಒಳ್ಳೆ ಊಟ ಸಿಗುತ್ತದೆ. ಆಸ್ಪತ್ರೆ ಹೊರಗಿನ ಇಂದಿರಾ ಕ್ಯಾಂಟಿನ್ನಲ್ಲೂ 10 ರು.ಗೆ ಅನ್ನ ಸಾಂಬರ್ ಸಿಗುತ್ತಿದೆ. ಆದರೆ, ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಅನ್ನ-ಸಾಂಬಾರ್ ಗೆ 92 ರೂ. ಮಾಡ್ತಿದ್ದೀರಲ್ರೀ.. ನಾನೂ ಮುದ್ದೆ ತಿನ್ನುವವನೇ. ಒಂದು ಮುದ್ದೆ ತಯಾರಿಗೆ ಹೆಚ್ಚಂದ್ರೆ 10ರಿಂದ 15 ರು. ಖರ್ಚಿರೋದು. ಆದರೆ, ಇಲ್ಲಿ 92 ರೂ. ಮಾಡಿ ಬಡ ರೋಗಿಗಳಿಂದ ಹಣ ಕೇಳುತ್ತಿದ್ದೀರಾ..? ಈ ಊಟದ ಟೆಂಡರ್ ಅನುಮೋದಿಸಿದ್ದು ಯಾರ್ರೀ.. ಎಂದು ಸ್ಥಳದಲ್ಲಿದ್ದ ವೈದ್ಯರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಅಲ್ಲದೆ, ಆಸ್ಪತ್ರೆ ಊಟಕ್ಕೆ ನೀಡಿರುವ ಟೆಂಡರ್ ಅವಧಿ ಕಳೆದ ಮಾರ್ಚ್ ತಿಂಗಳಿಗೆ ಮುಕ್ತಾಯವಾಗಿದ್ದರೂ ಈವರೆಗೂ ಯಾಕೆ ಹೊಸ ಟೆಂಡರ್ ಕರೆದಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ವೇಳೆ ತಡಬಡಾಯಿಸಿದ ಗುಮಾಸ್ತ ಮೋಹನ್, ಇಲಾಖೆಯ ಮೇಲಾಧಿಕಾರಿಗಳಿಂದ ಅನುಮತಿ ಬಂದಿಲ್ಲ. ಹಾಗಾಗಿ ಟೆಂಡರ್ ಕರೆದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದರು. ಕಡತಗಳ ಪರಿಶೀಲನೆ ನಡೆಸಿದ ಬಳಿಕ ಒಳರೋಗಿಗಳ ಊಟದ ದುಬಾರಿ ವೆಚ್ಚದ ಬಗ್ಗೆ ತನಿಖೆ ನಡೆಸಿ, ಶೀಘ್ರದಲ್ಲಿ ವರದಿ ನೀಡುವಂತೆ ಸ್ಥಳದಲ್ಲಿದ್ದ ತಹಸೀಲ್ದಾರ್ ನಯೀಮುನ್ನೀಸಾ ಅವರಿಗೆ ತಾಕೀತು ಮಾಡಿದರು.
A lump, sambar or a plate of rice sambar, which is given to inpatients at a public hospital in the town, costs Rs 92. Mandya Deputy Commissioner Dr. Kumar, who was shocked to see the bill being paid, reprimanded the doctors at the hospital.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm