ಬ್ರೇಕಿಂಗ್ ನ್ಯೂಸ್
12-07-23 12:21 pm HK News Desk ಕರ್ನಾಟಕ
ಮಂಡ್ಯ, ಜುಲೈ 12: ಮಂಗಳೂರಿನಲ್ಲಿ ಜಿಪಂ ಸಿಇಓ, ಅಪರ ಜಿಲ್ಲಾಧಿಕಾರಿ ಆಗಿ ಸರಳ ವ್ಯಕ್ತಿತ್ವ ಮತ್ತು ಕರ್ತವ್ಯ ದಕ್ಷತೆಯಿಂದ ಹೆಸರು ಮಾಡಿದ್ದ ಡಾ.ಕುಮಾರ್ ಇದೀಗ ಮಂಡ್ಯದಲ್ಲಿ ಜಿಲ್ಲಾಧಿಕಾರಿಯಾಗಿಯೂ ಜನಪರ ಕೆಲಸದಿಂದ ಗಮನ ಸೆಳೆದಿದ್ದಾರೆ. ನಾಗಮಂಗಲ ತಾಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಜಿಲ್ಲಾಧಿಕಾರಿ, ಅಲ್ಲಿ ಪ್ಲೇಟ್ ಊಟಕ್ಕೆ ದುಬಾರಿ ದರ ಕೀಳುತ್ತಿದ್ದುದನ್ನು ನೋಡಿ ಶಾಕ್ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ, ಸಾಂಬಾರ್ ಅಥವಾ ಒಂದು ಪ್ಲೇಟ್ ಅನ್ನ ಸಾಂಬರ್ಗೆ 92 ರು. ಬಿಲ್ ಮಾಡುತ್ತಿರುವುದನ್ನು ಕಂಡ ಜಿಲ್ಲಾಧಿಕಾರಿ, ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಕುಂದು ಕೊರತೆಗಳ ಬಗ್ಗೆ ಹೊರರೋಗಿಗಳು ಮತ್ತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾಗಲೇ ಒಳರೋಗಿಗಳಿಗೆ ನೀಡುತ್ತಿರುವ ಊಟದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಆಸ್ಪತ್ರೆಯ ವಾರ್ಡ್ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ, ಒಳರೋಗಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ, ಆಡಳಿತದ ಖರ್ಚು-ವೆಚ್ಚಗಳ ಕಡತ ಪರಿಶೀಲನೆ ನಡೆಸಿದರು. ಈ ವೇಳೆ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ ಸಾಂಬರ್ ಅಥವಾ ಒಂದು ಪ್ಲೇಟ್ ಅನ್ನ ಸಾಂಬರ್ಗೆ 92 ರೂ., ಒಂದು ಬಾಳೆ ಹಣ್ಣಿಗೆ 8 ರು. ಹಾಗೂ ಒಂದು ಮೊಟ್ಟೆಗೆ 10 ರೂ ಬಿಲ್ ಮಾಡುತ್ತಿರುವುದನ್ನು ಕಂಡು ಕಿಡಿಯಾದರು.
ಖಾಸಗಿ ಹೋಟೆಲ್ಗಳಲ್ಲೇ ಕನಿಷ್ಠ 40 ರಿಂದ 60 ರು.ಗೆ ಮುದ್ದೆ, ಚಪಾತಿ, ಅನ್ನ ಸಾಂಬರ್, ಒಳ್ಳೆ ಊಟ ಸಿಗುತ್ತದೆ. ಆಸ್ಪತ್ರೆ ಹೊರಗಿನ ಇಂದಿರಾ ಕ್ಯಾಂಟಿನ್ನಲ್ಲೂ 10 ರು.ಗೆ ಅನ್ನ ಸಾಂಬರ್ ಸಿಗುತ್ತಿದೆ. ಆದರೆ, ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಅನ್ನ-ಸಾಂಬಾರ್ ಗೆ 92 ರೂ. ಮಾಡ್ತಿದ್ದೀರಲ್ರೀ.. ನಾನೂ ಮುದ್ದೆ ತಿನ್ನುವವನೇ. ಒಂದು ಮುದ್ದೆ ತಯಾರಿಗೆ ಹೆಚ್ಚಂದ್ರೆ 10ರಿಂದ 15 ರು. ಖರ್ಚಿರೋದು. ಆದರೆ, ಇಲ್ಲಿ 92 ರೂ. ಮಾಡಿ ಬಡ ರೋಗಿಗಳಿಂದ ಹಣ ಕೇಳುತ್ತಿದ್ದೀರಾ..? ಈ ಊಟದ ಟೆಂಡರ್ ಅನುಮೋದಿಸಿದ್ದು ಯಾರ್ರೀ.. ಎಂದು ಸ್ಥಳದಲ್ಲಿದ್ದ ವೈದ್ಯರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಅಲ್ಲದೆ, ಆಸ್ಪತ್ರೆ ಊಟಕ್ಕೆ ನೀಡಿರುವ ಟೆಂಡರ್ ಅವಧಿ ಕಳೆದ ಮಾರ್ಚ್ ತಿಂಗಳಿಗೆ ಮುಕ್ತಾಯವಾಗಿದ್ದರೂ ಈವರೆಗೂ ಯಾಕೆ ಹೊಸ ಟೆಂಡರ್ ಕರೆದಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ವೇಳೆ ತಡಬಡಾಯಿಸಿದ ಗುಮಾಸ್ತ ಮೋಹನ್, ಇಲಾಖೆಯ ಮೇಲಾಧಿಕಾರಿಗಳಿಂದ ಅನುಮತಿ ಬಂದಿಲ್ಲ. ಹಾಗಾಗಿ ಟೆಂಡರ್ ಕರೆದಿಲ್ಲ ಎಂದು ಹಾರಿಕೆಯ ಉತ್ತರ ನೀಡಿದರು. ಕಡತಗಳ ಪರಿಶೀಲನೆ ನಡೆಸಿದ ಬಳಿಕ ಒಳರೋಗಿಗಳ ಊಟದ ದುಬಾರಿ ವೆಚ್ಚದ ಬಗ್ಗೆ ತನಿಖೆ ನಡೆಸಿ, ಶೀಘ್ರದಲ್ಲಿ ವರದಿ ನೀಡುವಂತೆ ಸ್ಥಳದಲ್ಲಿದ್ದ ತಹಸೀಲ್ದಾರ್ ನಯೀಮುನ್ನೀಸಾ ಅವರಿಗೆ ತಾಕೀತು ಮಾಡಿದರು.
A lump, sambar or a plate of rice sambar, which is given to inpatients at a public hospital in the town, costs Rs 92. Mandya Deputy Commissioner Dr. Kumar, who was shocked to see the bill being paid, reprimanded the doctors at the hospital.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm