ಬ್ರೇಕಿಂಗ್ ನ್ಯೂಸ್
12-07-23 06:25 pm HK News Desk ಕರ್ನಾಟಕ
ಮೈಸೂರು, ಜುಲೈ 12: ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ. ಹಿಂದೂ ಕಾರ್ಯಕರ್ತರೇ ರಾಜ್ಯದಲ್ಲಿ ಒಬ್ಬೊಬ್ಬರೆ ಓಡಾಡಬೇಡಿ ಎಂದು ಮಾಜಿ ಸಚಿವ ಶ್ರೀರಾಮುಲು ಕರೆ ನೀಡಿದ್ದಾರೆ. ಅದಲ್ಲದೇ ಎಲ್ಲರನ್ನು ಮುಗಿಸುವ ಪ್ರಯತ್ನವನ್ನ ಮಾಡಿದ್ದಾರೆ. ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಮೋಸ, ವಂಚನೆಯಿಂದ ಕೊಲ್ಲುತ್ತಾರೆ ಎಂದು ಶ್ರೀರಾಮುಲು ಹೇಳಿದರು.
ತಿ ನರಸೀಪುರದಲ್ಲಿ ಹತ್ಯೆಯಾಗಿರುವ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಈ ಸರ್ಕಾರ ಬಂದ್ಮೇಲೆ ಹಿಂದೂ ಕಾರ್ಯಕರ್ತರ ಹತ್ಯೆಯಾಗ್ತಿದೆ. ಇಲ್ಲಿ ಧರ್ಮದ ವಿಚಾರವಾಗಿ ನಡೆದಿರುವ ಕೊಲೆ ಇದು. ಧರ್ಮ ಅಂತ ಬಂದಾಗ ನಾವೆಲ್ಲ ಒಂದೇ, ಪಕ್ಷ ಅನ್ನೋದು ಇಲ್ಲ ಎಂದು ತಿಳಿಸಿದರು.

ಕೊಲೆ ಬಗ್ಗೆ ತನಿಖೆ ನಡೆದರೆ ಯಾರ ಕುಮ್ಮಕ್ಕು ಅಂತಾ ಗೊತ್ತಾಗುತ್ತೆ. ವೇಣುಗೋಪಾಲ್ ಫೋನ್ ಪರಿಶೀಲಿಸಿದರೆ ಯಾರು ಎನ್ನುವುದು ಗೊತ್ತಾಗುತ್ತದೆ. ಅವರಿಗೆ ಯಾರೆಲ್ಲಾ ಫೋನ್ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ವೇಣುಗೋಪಾಲ್ ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡಿದ್ದ. ವೇಣುಗೋಪಾಲ್ ಯಾವುದೇ ಕ್ರಿಮಿನಲ್ ಕೆಲಸ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲೂ ಕೊಲೆ, ಹತ್ಯೆ, ದೌರ್ಜನ್ಯ ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ ಅಂದ ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ ಎಂದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರೀಕರಿಗೆ ರಕ್ಷಣೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ರಾಜ್ಯದ ಒಳಗಿನ ಜಿಹಾದಿ ಮನಸ್ಥಿತಿ ಇರುವ ಜನ ಎದ್ದು ಕೂರುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ. ವೇಣುಗೋಪಾಲನ ಕುಟುಂಬದ ಕಥೆ ಏನು.. ಅವರ ಮಕ್ಕಳಿಗೆ ಯಾರು ದಿಕ್ಕು. ವೇಣುಗೋಪಾಲ ನಾಯಕ್ ಕೊಲೆ ಪೂರ್ವ ನಿಯೋಜಿತ ಕೃತ್ಯ. ಜಿಹಾದಿ ಮನಸ್ಥಿತಿ ಜನ ಪ್ಲಾನ್ ಮಾಡಿಕೊಂಡು ಹಿಂದೂಗಳ ಕೊಲೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರಕ್ಕೆ ಈ ಕೊಲೆಗಳ ವಿಚಾರದಲ್ಲಿ ಗಂಭೀರತೆ ಇಲ್ಲ ಎಂದು ಹೇಳಿದರು.
Sriramulu warns Hindu Karyakartas not to walk or go alone, they might kill you anytime, be cautious Because its Congress government he added after visiting house of member of the “Yuva Brigade" Venugopal in Mysuru.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm