ಬ್ರೇಕಿಂಗ್ ನ್ಯೂಸ್
13-07-23 08:35 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 13: ಆದಷ್ಟು ಬೇಗ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಬೇಕಿತ್ತು. ಆದರೆ, ಏಕೆ ವಿಳಂಬವಾಗುತ್ತಿದೆ ಎಂದು ಕೇಳುವ ಅಧಿಕಾರ ನನಗೆ ಇಲ್ಲ. ಕಾಂಗ್ರೆಸ್ನ ಸ್ಥಿತಿ ನಮಗೆ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಮೂಲಕ ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷ. ವರಿಷ್ಠರು ಏನೇನು ಯೋಚನೆ ಮಾಡ್ತಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ಏಕೆ ವಿಳಂಬ ಮಾಡ್ತಿದ್ದಾರೆ ಎಂದು ಕೇಳುವ ಅಧಿಕಾರ ನನಗೂ ಇಲ್ಲ. ಆದಷ್ಟು ಬೇಗ ವಿಪಕ್ಷ ನಾಯಕನ ಆಯ್ಕೆ ಮಾಡಿ ಎಂದು ಪ್ರಾರ್ಥನೆ ಮಾಡ್ತೀನಿ. ಇವತ್ತು ಕಾಂಗ್ರೆಸ್ ಸ್ಥಿತಿ ನಮಗೆ ಬಂದಿದೆ. ನಮ್ಮ ಸ್ಥಿತಿ ಅವರಿಗೆ ಬಂದಿದೆ. ಆಗ ನಾವು ದುರ್ಬಲರಾಗಿದ್ದೇವು. ಈಗ ಬಿಜೆಪಿ ಶಕ್ತಿಶಾಲಿಯಾಗಿದೆ ಎಂದರು.
ಕಾಂಗ್ರೆಸ್ ದುರ್ಬಲವಾಗಿದೆ, ಗ್ಯಾರಂಟಿ ಯೋಜನೆಯಲ್ಲೇ ತೊಡಗಿಬಿಟ್ಟಿದ್ದಾರೆ. ಚುನಾವಣಾ ಪ್ರಣಾಳಿಕೆ ಮಾಡಬೇಕಾದರೆ ನಿಮಗೆ ಮೈಮೇಲೆ ಜ್ಞಾನ ಇರಲಿಲ್ವಾ? ಗ್ಯಾರಂಟಿ ಯೋಜನೆಗೆ ಎಷ್ಟು ದುಡ್ಡು ಬೇಕಾಗುತ್ತದೆ ಎಂಬುದು ಗೊತ್ತಿರಲಿಲ್ವಾ? ಅಕ್ಕಿ ಕೊಡಿ ಅಂತಾ ಮೋದಿ ಅವರನ್ನು ಕೇಳಿದ್ರಾ? ಕೇಂದ್ರ ಸರಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡ್ತಿದೆ. ನೀವು 10 ಕೆಜಿ ಕೊಡ್ತಿವಿ ಅಂದಿದ್ರಿ. ಈಗ ಅಕ್ಕಿ ಕೊಡಲು ಆಗದಿದ್ದರೆ 10 ಕೆಜಿ ಅಕ್ಕಿ ದುಡ್ಡು ಕೊಡಿ. ಉಚಿತ ಕೊಡುತ್ತೇವೆ ಎಂದಾಕ್ಷಣ ಜನ ನಂಬಿದ್ದರು ಎಂದು ಕಿಡಿಕಾರಿದರು.
ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದೀರಿ, ಲೋಕಸಭೆ ಚುನಾವಣೆಯಲ್ಲಿ ನಿಮಗೆ ಜನ ಪಾಠ ಕಲಿಸುತ್ತಾರೆ. ಯಾವ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಅನೇಕರು ಐದು ವರ್ಷ ಇರುತ್ತದೋ ಇಲ್ವಾ ಎನ್ನುವ ಅನುಮಾನ ವ್ಯಕ್ತಪಡಿಸುತ್ತಾರೆ. ಶಕ್ತಿ ಯೋಜನೆ ಜಾರಿಯಿಂದ ಆಟೋ ಚಾಲಕರ ಹೊಟ್ಟೆಗೆ ತಣ್ಣೀರು ಬಟ್ಟೆ ಬಿದ್ದಿದೆ. ಖಾಸಗಿ ಬಸ್ನಲ್ಲೂ ಫ್ರೀ ಮಾಡಿ, ಅವರಿಗು ಹಣ ಕೊಡಿ ಎಂದು ಹೇಳಿದರು.
K S Eshwarappa slams Congress over gaurantees, says did modi promise you of giving rice, people are suffering, they will teach you lessons he added.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm