ಬ್ರೇಕಿಂಗ್ ನ್ಯೂಸ್
13-07-23 11:04 pm HK News Desk ಕರ್ನಾಟಕ
ಕೋಲಾರ, ಜುಲೈ 13: ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೇಜಿಗೆ 200 ರೂ. ತಲುಪಿದ್ದು ಕಳ್ಳತನದ ಭಯ ಶುರುವಾಗಿದೆ. ದರ ಹೆಚ್ಚಾದ್ದರಿಂದ ಟೊಮೆಟೋ ಕೃಷಿಕರು ಕಳವು ಆತಂಕದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಮಾಡಿಕೊಂಡಿದ್ದಾರೆ. ಕೋಲಾರದ ತರಕಾರಿ ಮಾರುಕಟ್ಟೆಯಲ್ಲಿಯೂ ರಕ್ಷಣೆಗೆ ಪೊಲೀಸರನ್ನು ನೇಮಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಲವು ತೋಟಗಳಲ್ಲಿ ಈಗಾಗಲೇ ಟೊಮೆಟೊ ಕಳವು ಪ್ರಕರಣ ನಡೆದಿದ್ದು ಕಳವು ತಡೆಯಲು ತೋಟಗಳಲ್ಲಿ ರೈತರು ಹಗಲಿರುಳು ಕಾವಲು ನಿಲ್ಲುತ್ತಿದ್ದಾರೆ. ಕೋಲಾರದ ಟೊಮೆಟೊ ಮಾರುಕಟ್ಟೆಯಲ್ಲಿ ನಿತ್ಯವೂ ಕೋಟ್ಯಾಂತರ ರುಪಾಯಿ ವಹಿವಾಟು ನಡೆಯುತ್ತದೆ. ಟೊಮೆಟೊಗೆ ಬಂಗಾರದ ಬೆಲೆ ಬಂದಿರೋದ್ರಿಂದ ಮಾರುಕಟ್ಟೆಯಲ್ಲಿ ರಕ್ಷಣೆ ಅನಿವಾರ್ಯ ಆಗಿದ್ದು ಬೆಳೆಗಾರರೇ ತಮ್ಮ ಟೊಮೆಟೋ ದಾಸ್ತಾನಿನ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.
ಹೀಗಾಗಿ ಟೊಮೆಟೊ ಮಾರುಕಟ್ಟೆಯಲ್ಲಿ ಭದ್ರತೆಗಾಗಿ ಸಿಸಿ ಕ್ಯಾಮರಾ ಮತ್ತು ಖಾಸಗಿ ರಕ್ಷಕರನ್ನು ನೇಮಿಸಲಾಗಿದೆ. ಜೊತೆಗೆ, ಪೊಲೀಸರ ಭದ್ರತೆಯನ್ನೂ ಒದಗಿಸಲಾಗಿದೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುವ ಜಿಲ್ಲೆಗಳಾಗಿದ್ದು ಈ ಭಾಗದ ರೈತರು ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ. ದರ ಇಲ್ಲದೇ ಇದ್ದಾಗ ರಸ್ತೆಗೆ ಸುರಿಯುತ್ತಿದ್ದ ರೈತರು ಒಂದೊಂದು ಟೊಮ್ಯಾಟೊ ಕೂಡ ಅಮೂಲ್ಯ ಎನ್ನುವ ರೀತಿ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಭದ್ರತೆ ನಿಲ್ಲುತ್ತಿದ್ದಾರೆ.
The price of tomatoes in the market has gone up by Rs 200 per kg. The fear of theft has begun. Tomato growers have taken up police security in the wake of fears of theft as the prices have gone up. Police have also been deployed at the vegetable market in Kolar for protection.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm