ಬ್ರೇಕಿಂಗ್ ನ್ಯೂಸ್
14-07-23 06:17 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 14: ದೇಶದಲ್ಲಿ ಬಿಜೆಪಿ ಅವನತಿ ಕರ್ನಾಟಕದಿಂದಲೇ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ ಎನ್ನುವುದನ್ನು ವಿಧಾನಸಭೆ ಚುನಾವಣೆಯಲ್ಲಿ ನಿರೂಪಿಸಿದ್ದಾರೆ. ಮೋದಿಯವರು ರಾಜ್ಯದ ಯಾವ ಜಿಲ್ಲೆಯಲ್ಲಿ ಪ್ರಚಾರ ಮಾಡಿದ್ದರೋ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿದೆ. ಇನ್ನು ಮುಂದೆ ರಾಜ್ಯದ ಬಿಜೆಪಿ ನಾಯಕರು ಮೋದಿ ಮೇಲೆ ಅವಲಂಬಿತರಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.
ಶುಕ್ರವಾರ ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕಾಗಿ ಒಂದೇ ತಿಂಗಳ ಅಂತರದಲ್ಲಿ 28 ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ. ಯಾವ ಪ್ರಧಾನಿ ಕೂಡ ರಾಜ್ಯದ ಚುನಾವಣೆಗೆ ಇಷ್ಟು ಮಹತ್ವ ನೀಡಿದ ನಿದರ್ಶನ ಇಲ್ಲ. ಆದರೆ ಮೋದಿ ಪ್ರವಾಸ ಮಾಡಿದ ಕಡೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದರು.

ಮೋದಿ ಬಗ್ಗೆ ದೇಶದಲ್ಲಿ ಪಾಪ್ಯುಲಾರಿಟಿ ಇದೆ. ಅದರಲ್ಲಿ ಯಾವುದೇ ಡೌಟ್ ಇಲ್ಲ. ಆದರೆ ಅದು ಈವಾಗ ಮಂಕಾಗಿದೆ. ರಾಜ್ಯದಿಂದಲೇ ಶುರುವಾಗಿದೆ ನಿಮ್ಮ ಅವನತಿ. ನರೇಂದ್ರ ಮೋದಿ ಹೊಗಳುವುದು ಬಿಟ್ಟರೆ ಬಿಜೆಪಿಗೆ ಏನಿದೆ ಕೆಲಸ ? ಎಂದು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಕಾಂಗ್ರೆಸ್ ನಲ್ಲಿ ಎರಡು ಬಾರಿ ಸಿಎಂ ಆಗಲು ಅವಕಾಶ ಸಿಕ್ತು, ಅದಕ್ಕಾಗಿ ಪಕ್ಷಕ್ಕೆ ಋಣಿ ಆಗಿದ್ದೇನೆ ಎಂದರು.
ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್ ಪಕ್ಷದ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಚುನಾವಣೆಯಲ್ಲಿ ಹೀನಾಯ ಸೋಲು ಕಾಣಬೇಕಾಯಿತು ಎಂದರು.
"ಮನುಷ್ಯ ಜಾತಿ ತಾನೊಂದೇ ವಲಂ" ಎನ್ನುವ ಕವಿ ಪಂಪ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಪಂಪ, ಬಸವಣ್ಣ ಹೀಗೆ ಮಹಾನುಭಾವರ ಹೆಸರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ. ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣ ಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿ, 'ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?" ಎಂದು ಪ್ರಶ್ನಿಸಿದರು.
ನಾನು ಮಾತಾಡುವಾಗ ಯಾರೂ ದಾರಿ ತಪ್ಪಿಸಲು ಸಾದ್ಯವಿಲ್ಲ. ಈ ಚುನಾವಣೆಯಲ್ಲಿ ಜನ ಕೋಮುವಾದದ ವಿರುದ್ದ, ಭ್ರಷ್ಟಾಚಾರದ ವಿರುದ್ದ, ಬೆಲೆ ಏರಿಕೆ ವಿರುದ್ದ ಮತ ಕೊಟ್ಟಿದ್ದಾರೆ. ನಮ್ಮ ಐದು ಗ್ಯಾರಂಟಿಗಳ ಪರ ಮತ ನೀಡಿದ್ದಾರೆ. ನೀವು ಪ್ರಣಾಳಿಕೆ ಕೊಟ್ಟಿದ್ದೀರಿ, ಜೆಡಿಎಸ್ ಕೂಡ ಪಂಚರತ್ನಗಳನ್ನು ಹೇಳಿಕೊಂಡು ಹೋದ್ರು. ಕುಮಾರಸ್ವಾಮಿ 123 ಸ್ಥಾನ ಬರಲಿಲ್ಲ ಅಂದ್ರೆ ಪಾರ್ಟಿ ವಿಸರ್ಜನೆ ಮಾಡ್ತೀನಿ ಅಂತ ಹೇಳಿದ್ದರು. ಪಾಪ ಅವರು 19 ಸ್ಥಾನಕ್ಕೆ ಬಂದು ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
BJP is on the way to decline in India. It started from Karnataka itself. Modi wave, Modi influence is fading. Chief Minister Siddaramaiah lashed out at the BJP saying that wherever Prime Minister Narendra Modi campaigned heavily in Karunad, the BJP lost miserably.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am