ಬ್ರೇಕಿಂಗ್ ನ್ಯೂಸ್
15-07-23 12:11 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯನ್ನು ಜುಲೈ 17 ಅಥವಾ 19ರಿಂದ ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿದ ಅವರು ಗೃಹ ಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಮಾಹಿತಿ ನೀಡಿದರು.
ಯೋಜನೆ ಉದ್ಘಾಟನೆಗೆ ನಮ್ಮ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆಯಲಾಗಿದ್ದು, ಅವರು ಲಭ್ಯವಾದರೆ ಜುಲೈ 17 ಸೋಮವಾರ ಸಂಜೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಉದ್ಘಾಟಿಸಲಾಗುದು. ರಾಷ್ಟ್ರೀಯ ನಾಯಕರು ಬರದಿದ್ದಲ್ಲಿ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಾರೆ ಎಂದು ಹೇಳಿದರು.
ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 19ರಿಂದ ಅವಕಾಶವಿದೆ. ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಗೃಹ ಜ್ಯೋತಿ ಯೋಜನೆಯಂತೆ ಈ ಯೋಜನೆಗೆ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಬೇಡಿಕೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸಲಾಗುವುದು. ಆದರೆ ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇಲ್ಲ ಎಂದು ಹೆಬ್ಬಾಳ್ಕರ್ ಮಾಹಿತಿ ನೀಡಿದರು.
ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭ ಸಿಗಲಿದೆ ಎಂದು ಹೇಳಿದರು.

ಅರ್ಜಿ ಸಲ್ಲಿಸುವುದು ಹೇಗೆ?
ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಖುಷಿಯಲ್ಲಿರುವಾಗಲೇ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ನೀಡುವ 'ಗೃಹ ಲಕ್ಷ್ಮಿ' ಯೋಜನೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಪೂರ್ಣಗೊಂಡಿದೆ.
200 ಯೂನಿಟ್ವರೆಗಿನ ಉಚಿತ ವಿದ್ಯುತ್ ಪೂರೈಸುವ 'ಗೃಹ ಜ್ಯೋತಿ' ಯೋಜನೆಯಡಿ ಈಗಾಗಲೇ ಆರಂಭವಾಗಿರುವ ಅರ್ಜಿ ಸ್ವೀಕಾರ ಪ್ರಕ್ರಿಯೆ ಒತ್ತಡ ಸೃಷ್ಟಿಸಿದ್ದು, ಸೇವಾ ಸಿಂಧು ಸರ್ವರ್ ಓವರ್ಲೋಡ್ ಆಗಿ ಸಮಸ್ಯೆಯಾಗಿದೆ. ಇಂತಹ ಸಮಸ್ಯೆ ತಪ್ಪಿಸಲು 'ಗೃಹ ಲಕ್ಷ್ಮಿ'ಗೆ ಪ್ರತ್ಯೇಕ ಆ್ಯಪ್ ಸಿದ್ಧಪಡಿಸಲಾಗಿದೆ. ಜತೆಗೆ, ಬಾಪೂಜಿ ಸೇವಾ ಕೇಂದ್ರ, ನಾಡಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಮಹಿಳೆಯರ ಭಾರೀ ನಿರೀಕ್ಷೆಯ ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. https://sevasindhuservices.karnataka.gov.in/
Women and Child Welfare Minister Laxmi Hebbalkar dismissed allegations that women were unable to register for the Gruha Lakshmi scheme due to technical glitches in the server. “We are yet to start receiving applications for the scheme and there is no question of server problems,” she said.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm