ಬ್ರೇಕಿಂಗ್ ನ್ಯೂಸ್
15-07-23 04:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಮಂಗಳೂರು ಮೂಲದ ಜಯೇಶ್ ಪೂಜಾರಿ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
ಜಯೇಶ್ ಪೂಜಾರಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು ಅಲ್ಲಿಯೇ ಕೈದಿಯಾಗಿರುವ ಉಗ್ರ ಅಫ್ಸರ್ ಪಾಶ ಜೊತೆಗೆ ಸಂಪರ್ಕ ಹೊಂದಿದ್ದ ಎಂಬ ಮಾಹಿತಿಯನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಫ್ಸರ್ ಪಾಶ 2005ರಲ್ಲಿ ಬೆಂಗಳೂರಿನ ಐಐಎಸ್ಸಿ ಕೇಂದ್ರಕ್ಕೆ ಬಾಂಬ್ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಅಫ್ಸರ್ ಪಾಶ ಪಾಕಿಸ್ಥಾನ ಮೂಲದ ಲಷ್ಕರ್ ಇ- ತೈಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದುದಲ್ಲದೆ, ಸೆರೆಸಿಕ್ಕ ಬಳಿಕ ಬೆಳಗಾವಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾನೆ.
ಸಚಿವ ನಿತಿನ್ ಗಡ್ಕರಿಯವರ ನಾಗಪುರದ ಕಚೇರಿಗೆ ಎರಡೆರಡು ಬಾರಿ ಜೀವ ಬೆದರಿಕೆ ಕರೆ ಮಾಡಿರುವುದು ಜಯೇಶ್ ಪೂಜಾರಿ, ಅಫ್ಸರ್ ಪಾಶ ಜೊತೆ ಸೇರಿ ರೂಪಿಸಿದ್ದ ಸಂಚಿನ ಭಾಗ ಎನ್ನಲಾಗುತ್ತಿದೆ. ಈ ಬಗ್ಗೆ ಮಾಹಿತಿ ಕಲೆಹಾಕಲು ಮಹಾರಾಷ್ಟ್ರದ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರು ಬೆಳಗಾವಿಯ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು ತನಿಖೆ ನಡೆಸಿದ್ದಾರೆ. ಜಯೇಶ್ ಪೂಜಾರಿ ಮೊದಲ ಬಾರಿಗೆ ಕಳೆದ ಜನವರಿ 14ರಂದು ನಾಗಪುರದ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿದ್ದು, 100 ಕೋಟಿ ರೂಪಾಯಿ ಹಫ್ತಾ ಬೇಡಿಕೆ ಇಟ್ಟಿದ್ದ. ಹಣ ಕೊಡದೇ ಇದ್ದರೆ, ಸಂಸದರ ಕಚೇರಿಯನ್ನು ಬಾಂಬಿಟ್ಟು ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಿದ್ದ.
ಕರೆಯನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಹಿಂಡಲಗಾ ಜೈಲಿನಿಂದ ಕರೆ ಹೋಗಿದ್ದನ್ನು ಪತ್ತೆ ಮಾಡಿದ್ದರು. ಅಲ್ಲದೆ, ಜಯೇಶ್ ಪೂಜಾರಿಯನ್ನು ಈ ಕುರಿತ ಸಂಶಯದಿಂದ ತನಿಖೆ ನಡೆಸಿ ಮರಳಿ ಜೈಲಿಗೆ ಬಿಟ್ಟಿದ್ದರು. ಆನಂತರ, ಮಾರ್ಚ್ 21ರಂದು ನಾಗಪುರದ ಸಚಿವ ಗಡ್ಕರಿಯವರ ಜನಸಂಪರ್ಕ ಕಚೇರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು ಕರೆ ಮಾಡಿದ್ದ ವ್ಯಕ್ತಿ 10 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ. ಕರೆಯ ಜಾಡು ಹಿಡಿದು ಬಂದ ಮಹಾರಾಷ್ಟ್ರ ಪೊಲೀಸರು ಮಾರ್ಚ್ 28ರಂದು ಜಯೇಶ್ ಪೂಜಾರಿಯನ್ನು ಕಸ್ಟಡಿಗೆ ಪಡೆದಿದ್ದಾರೆ. ತನಿಖೆ ಸಂದರ್ಭದಲ್ಲಿ ಅಫ್ಸರ್ ಪಾಶ ಜೊತೆ ಆರೋಪಿಗೆ ಲಿಂಕ್ ಇರುವುದು ಪತ್ತೆಯಾಗಿದ್ದರಿಂದ ಆ ನಿಟ್ಟಿನಲ್ಲಿ ತನಿಖೆ ಸಾಗಿದೆ. ಸದ್ಯದಲ್ಲೇ ಪ್ರಕರಣದ ಬಗ್ಗೆ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಹಾಕಲಿದ್ದಾರೆ.
Police in Maharashtra's Nagpur have found links between Jayesh Pujari, arrested for allegedly making threatening phone calls to Union Minister Nitin Gadkari earlier this year, and Afsar Pasha, who is currently in jail in Karnataka after being convicted in a Bengaluru terror attack case, an official said.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm