ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 08:27 pm
HK News Staffer
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm