ಬ್ರೇಕಿಂಗ್ ನ್ಯೂಸ್
17-07-23 05:08 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 17: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದರಿಂದ ಬರಗಾಲ ಘೋಷಣೆ ಮಾಡುವ ಕುರಿತು ಸಚಿವ ಸಂಪುಟ ಸಭೆ ಇದೇ ವಾರದಲ್ಲಿ ನಡೆಯಲಿದ್ದು, ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್ನಲ್ಲಿ ಸದಸ್ಯೆ ಹೇಮಾಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಕಂದಾಯ ಸಚಿವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯ ಉಪ ಸಮಿತಿಯನ್ನು ರಚಿಸಲಾಗಿದೆ.
ಸಿದ್ದರಾಮಯ್ಯ ಅವರ ಸೂಚನೆಯಂತೆ ಈ ಸಮಿತಿಯು 15 ದಿನದ ಹಿಂದೆಯೇ ಸಭೆ ನಡೆಸಿದೆ. ಕಳೆದ ವಾರ ಮತ್ತೊಂದು ಸಭೆಯನ್ನು ನಡೆಸಿತ್ತು. ಈ ವಾರ ಇನ್ನೊಂದು ಸಭೆ ನಡೆಯಲಿದೆ. ವಾಡಿಕೆಗಿಂತ ಕಡಿಮೆ ಮಳೆ ಬಂದಿರುವ ಜಿಲ್ಲೆಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಈ ಹಿಂದೆಯೇ ಬರಗಾಲ ಘೋಷಣೆ ಮಾಡಬೇಕೆಂಬ ಬೇಡಿಕೆಯಿತ್ತು. ಆದರೆ ಜುಲೈ ತಿಂಗಳ 2ನೇ ವಾರ ರಾಜ್ಯದ ಕೆಲವು ಕಡೆ ಉತ್ತಮ ಮಳೆಯಾಗಿದ್ದರಿಂದ ಕಾದು ನೋಡಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಬಳ್ಳಾರಿ, ರಾಯಚೂರು, ಕೊಪ್ಪಳ, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ಮತ್ತಿತರ ಕಡೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮುಂದಿನ ಸಭೆಯೊಳಗೆ ಮಳೆ ಬಾರದಿದ್ದರೆ ಬರ ಘೋಷಣೆ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಅನೇಕ ಕಡೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಅಲ್ಲದೆ, ಕಳೆದ ವರ್ಷ ರಾಜ್ಯದ ಅನೇಕ ಕಡೆ ಶೇ.50ರಷ್ಟು ಬಿತ್ತನೆಯಾಗಿತ್ತು. ಈ ಬಾರಿ ಕೆಲವು ಕಡೆ ಮಾತ್ರ ಶೇ.25 ರಿಂದ ಶೇ. 23ರಷ್ಟು ಬಿತ್ತನೆ ಕಾರ್ಯ ಮುಗಿದಿದೆ ಎಂದು ಮಾಹಿತಿ ನೀಡಿದರು. ಬರಗಾಲ ಘೋಷಣೆ ಮಾಡಬೇಕಾದರೆ ಕೆಲವು ಮಾನದಂಡಗಳಿರುತ್ತವೆ. ಅದನ್ನು ಅನುಸರಿಸಿಯೇ ನಾವು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಚೆಲುವರಾಯಸ್ವಾಮಿ ಹೇಳಿದರು.
ರಾಜ್ಯದಲ್ಲಿ ಮುಂಗಾರು 10 ದಿನ ತಡವಾಗಿ ಆರಂಭವಾಗಿದೆ. ಶೇ. 36 ರಷ್ಟು ಮುಂಗಾರು ಕೊರತೆಯಾಗಿದೆ, ಕಳೆದ ಬಾರಿಗಿಂತ ಶೇ.10 ರಷ್ಟು ಕಡಿಮೆ ಬಿತ್ತನೆ ಕಾರ್ಯ ನಡೆದಿದ್ದು, ಕೃಷಿ ಚಟುವಟಿಕೆ ಉತ್ತೇಜನಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ, ಕಳಪೆ ಬಿತ್ತನೆ ಬೀಜ ಮತ್ತು ಕಳಪೆ ಔಷಧ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ.
Lack of rainfall in the state, Decision on declaring drought will be taken in this week said Minister N Cheluvaraya swamy. The committee met 15 days ago on the instructions of Siddaramaiah. Another meeting was held last week. Another meeting will be held this week. A decision will be taken on declaring districts with below normal rainfall as drought-hit, he said.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm