ರಾಜ್ಯದಲ್ಲಿ ಮಳೆ ಕೊರತೆ ; ಬರ ಘೋಷಣೆ ಬಗ್ಗೆ ಇದೇ ವಾರ ನಿರ್ಧಾರ - ಸಚಿವ ಚೆಲುವರಾಯಸ್ವಾಮಿ 

17-07-23 05:08 pm       Bangalore Correspondent   ಕರ್ನಾಟಕ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದರಿಂದ ಬರಗಾಲ ಘೋಷಣೆ ಮಾಡುವ ಕುರಿತು ಸಚಿವ ಸಂಪುಟ ಸಭೆ ಇದೇ ವಾರದಲ್ಲಿ ನಡೆಯಲಿದ್ದು, ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು, ಜುಲೈ 17: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದರಿಂದ ಬರಗಾಲ ಘೋಷಣೆ ಮಾಡುವ ಕುರಿತು ಸಚಿವ ಸಂಪುಟ ಸಭೆ ಇದೇ ವಾರದಲ್ಲಿ ನಡೆಯಲಿದ್ದು, ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಸದಸ್ಯೆ ಹೇಮಾಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಕಂದಾಯ ಸಚಿವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯ ಉಪ ಸಮಿತಿಯನ್ನು ರಚಿಸಲಾಗಿದೆ. 

ಸಿದ್ದರಾಮಯ್ಯ ಅವರ ಸೂಚನೆಯಂತೆ ಈ ಸಮಿತಿಯು 15 ದಿನದ ಹಿಂದೆಯೇ ಸಭೆ ನಡೆಸಿದೆ. ಕಳೆದ ವಾರ ಮತ್ತೊಂದು ಸಭೆಯನ್ನು ನಡೆಸಿತ್ತು. ಈ ವಾರ ಇನ್ನೊಂದು ಸಭೆ ನಡೆಯಲಿದೆ. ವಾಡಿಕೆಗಿಂತ ಕಡಿಮೆ ಮಳೆ ಬಂದಿರುವ ಜಿಲ್ಲೆಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

Siddaramaiah, DK Shivakumar, Karnataka: 4 Facts About Siddaramiah, Set To  Take Charge As Karnataka Chief Minister

ಈ ಹಿಂದೆಯೇ ಬರಗಾಲ ಘೋಷಣೆ ಮಾಡಬೇಕೆಂಬ ಬೇಡಿಕೆಯಿತ್ತು. ಆದರೆ ಜುಲೈ ತಿಂಗಳ 2ನೇ ವಾರ ರಾಜ್ಯದ ಕೆಲವು ಕಡೆ ಉತ್ತಮ ಮಳೆಯಾಗಿದ್ದರಿಂದ ಕಾದು ನೋಡಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಬಳ್ಳಾರಿ, ರಾಯಚೂರು, ಕೊಪ್ಪಳ, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ಮತ್ತಿತರ ಕಡೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮುಂದಿನ ಸಭೆಯೊಳಗೆ ಮಳೆ ಬಾರದಿದ್ದರೆ ಬರ ಘೋಷಣೆ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

Drought: Central delegation to assess crop damage in Maharashtra | India  News,The Indian Express

ಅನೇಕ ಕಡೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಅಲ್ಲದೆ, ಕಳೆದ ವರ್ಷ ರಾಜ್ಯದ ಅನೇಕ ಕಡೆ ಶೇ.50ರಷ್ಟು ಬಿತ್ತನೆಯಾಗಿತ್ತು. ಈ ಬಾರಿ ಕೆಲವು ಕಡೆ ಮಾತ್ರ ಶೇ.25 ರಿಂದ ಶೇ. 23ರಷ್ಟು ಬಿತ್ತನೆ ಕಾರ್ಯ ಮುಗಿದಿದೆ ಎಂದು ಮಾಹಿತಿ ನೀಡಿದರು. ಬರಗಾಲ ಘೋಷಣೆ ಮಾಡಬೇಕಾದರೆ ಕೆಲವು ಮಾನದಂಡಗಳಿರುತ್ತವೆ. ಅದನ್ನು ಅನುಸರಿಸಿಯೇ ನಾವು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಚೆಲುವರಾಯಸ್ವಾಮಿ ಹೇಳಿದರು.

ರಾಜ್ಯದಲ್ಲಿ ಮುಂಗಾರು 10 ದಿನ ತಡವಾಗಿ ಆರಂಭವಾಗಿದೆ. ಶೇ. 36 ರಷ್ಟು ಮುಂಗಾರು ಕೊರತೆಯಾಗಿದೆ, ಕಳೆದ ಬಾರಿಗಿಂತ ಶೇ.10 ರಷ್ಟು ಕಡಿಮೆ ಬಿತ್ತನೆ ಕಾರ್ಯ ನಡೆದಿದ್ದು, ಕೃಷಿ ಚಟುವಟಿಕೆ ಉತ್ತೇಜನಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ, ಕಳಪೆ ಬಿತ್ತನೆ ಬೀಜ ಮತ್ತು ಕಳಪೆ ಔಷಧ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ.

Lack of rainfall in the state, Decision on declaring drought will be taken in this week said Minister N Cheluvaraya swamy. The committee met 15 days ago on the instructions of Siddaramaiah. Another meeting was held last week. Another meeting will be held this week. A decision will be taken on declaring districts with below normal rainfall as drought-hit, he said.