ಬ್ರೇಕಿಂಗ್ ನ್ಯೂಸ್
18-07-23 08:41 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18: ಲೋಕಸಭಾ ಚುನಾವಣೆ ಗಮನದಲ್ಲಿಟ್ಟು ಬಿಜೆಪಿ ವಿರೋಧಿ 26 ವಿಪಕ್ಷಗಳು ಮಹಾಘಟಬಂಧನ್ ಸಭೆಯನ್ನು ಬೆಂಗಳೂರಿನಲ್ಲಿ ಎರಡು ದಿನ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸುವ ಬಗ್ಗೆ ಮಹತ್ವದ ಚರ್ಚೆ ನಡೆಸಿವೆ. ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೊಸ ಒಕ್ಕೂಟಕ್ಕೆ ಇಂಡಿಯಾ ಎನ್ನುವ ಹೆಸರಿಡಲಾಗಿದೆ ಎಂದು ತಿಳಿಸಿದ್ದಾರೆ. ಇಂಡಿಯಾ ಅನ್ನೋ ಹೆಸರೇ ನಮ್ಮ ಮೊದಲ ಜಯ. ನರೇಂದ್ರ ಮೋದಿ ಸಾಧ್ಯವಾದರೆ 'ಇಂಡಿಯಾ'ವನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.
INDIA ಎಂದರೆ ಇಂಡಿಯನ್ ನ್ಯಾಶನಲ್ ಡೆವಲಪ್ಮೆಂಟ್ ಇಂಕ್ಲೂಸಿವ್ ಎಲಯನ್ಸ್ ಎಂದು ಖರ್ಗೆ ಹೇಳಿದ್ದಾರೆ. ಈ ಹಿಂದೆ ಯುಪಿಎ ಹೆಸರಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟ ಇತ್ತು. ಅದನ್ನೀಗ ದೇಶವೇ ನಮಗೆ ದೊಡ್ಡದು ಎನ್ನುವ ರೀತಿ ತೋರಿಸುವ ಸಲುವಾಗಿ ಇಂಡಿಯಾ ಹೆಸರಿಡಲು ವಿಪಕ್ಷಗಳು ನಿರ್ಣಯಕ್ಕೆ ಬಂದಿವೆ.
ನೀವು ಇಂಡಿಯಾಗೆ ಸವಾಲು ಹಾಕಬಹುದೇ ?
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಎನ್ಡಿಎ ಮಿತ್ರ ಪಕ್ಷಗಳೇ, ನೀವು ಇಂಡಿಯಾ (ಐಎನ್ಡಿಐಎ)ಗೆ ಸವಾಲು ಹಾಕಬಹುದೇ? ಬಿಜೆಪಿಯವರು ಇಂಡಿಯಾಗೆ ಚಾಲೆಂಜ್ ಮಾಡುತ್ತೀರಾ? ನಾವು ನಮ್ಮ ತಾಯ್ನಾಡನ್ನು ಪ್ರೀತಿಸುತ್ತೇವೆ. ಭವಿಷ್ಯದಲ್ಲಿಯೂ ನಿಮ್ಮ ಜೊತೆಗಿದ್ದೇವೆ. ರೈತರ ಜೊತೆಗಿದ್ದೇವೆ, ಪೊಲೀಸರ ಜೊತೆಗಿದ್ದೇವೆ. ದೇಶದ ಜೊತೆಗಿದ್ದೇವೆ ಎಂದು ಇದೇ ವೇಳೆ ಮಾರ್ಮಿಕ ಮಾತುಗಳನ್ನು ಆಡಿದ್ದಾರೆ.
ಮುಂದಿನ ಸಭೆ ಮುಂಬೈನಲ್ಲಿ ; ಠಾಕ್ರೆ
ನಾವು ದೇಶವನ್ನು ಸುರಕ್ಷಿತವಾಗಿ ಇಡಲು ಬಯಸುತ್ತೇವೆ. ಮುಂದಿನ ಸಭೆಯನ್ನು ಆಗಸ್ಟ್ 6ರಂದು ಮುಂಬೈನಲ್ಲಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇವತ್ತಿನ ಸಭೆಯಲ್ಲಿ ಮಹತ್ವದ ಚರ್ಚೆ ಆಗಿದೆ. ದೇಶದ ಮೇಲೆ ಆಕ್ರಮಣ ಮಾಡಲಾಗುತ್ತಿದೆ. ಬಿಜೆಪಿಯವರು ದೇಶವನ್ನು ಮಾರುತ್ತಿದ್ದಾರೆ, ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ದೇಶದ ಧ್ವನಿಯನ್ನು ಅಡಗಿಸುತ್ತಿರುವವರ ಜೊತೆಗೆ ಹೋರಾಟ ಮಾಡುತ್ತಿದ್ದೇವೆ. ದೇಶಕ್ಕಾಗಿ ಮುಂದೇನು ಮಾಡಬೇಕು ಎಂದು ಚರ್ಚಿಸಲು ಮುಂದಿನ ಸಭೆ ಮಾಡಲಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.
26 ಪಕ್ಷಗಳ ನಾಯಕರು ಸಭೆ ಸೇರಿ ಚರ್ಚಿಸಿದ್ದೇವೆ. ದೇಶದಲ್ಲಿ ಎಲ್ಲರೂ ಆತಂಕದಲ್ಲಿದ್ದಾರೆ. ಹೀಗಾಗಿ ನಾವು ಸೇರಿ ದೇಶವನ್ನು ಮುನ್ನಡೆಸಲು ನಿರ್ಧರಿಸಿದ್ದೇವೆ. ಬಿಜೆಪಿಯವರು ದೇಶ ಮಾರುವ ಒಪ್ಪಂದ ಮಾಡಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
The day 2 of the Opposition parties meeting in Bengaluru has made an important decision regarding the renaming of UPA (United Progressive Alliance). Reports claim that the UPA will now be renamed 'INDIA' or ‘I.N.D.I.A’, the full-form of which will be ‘Indian National Democratic Inclusive Alliance’.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm