ಬ್ರೇಕಿಂಗ್ ನ್ಯೂಸ್
19-07-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ನಾಯಕರ ಧರಣಿಯಿಂದ ವಿಧಾನಸಭೆ ಬುಧವಾರ ರಣರಂಗವಾಗಿ ಬದಲಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದ ಘಟನೆಯು ನಡೆಯಿತು. ಅಸಭ್ಯ ವರ್ತನೆ ಹಿನ್ನೆಲೆ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದರಿಂದ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ಗಳು ಹೊರಹಾಕುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ತಗೊಂಡರು.
ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬುಲೆನ್ಸ್ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಿಧಾನಸೌಧದಲ್ಲಿ ತಳ್ಳಾಟ ನೂಕಾಟ ನಡೆದು ಪ್ರವೇಶ ದ್ವಾರದ ಬಾಗಿಲಿನ ಗಾಜು ಒಡೆದುಹೋಗಿವೆ.
ಬಿಪಿ ಹಠಾತ್ತನೇ ಹೆಚ್ಚಳ ಆಗಿರುವ ಕಾರಣ ಸುಸ್ತಾಗಿ ಕುಸಿದಿದ್ದಾರೆ. ಅವರಿಗೆ ಶುಗರ್ ಕೂಡ ಇರೋದರಿಂದ ಹೆಚ್ಚಿನ ಕೇರಿಂಗ್ ಅಗತ್ಯವಾಗಿದೆ. ಹೀಗಾಗಿ ಐಸಿಯೂನಲ್ಲಿ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಗೆ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಇತ್ತ ಫೋರ್ಟಿಸ್ ಆಸ್ಪತ್ರೆಯ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯದಲ್ಲಿ ಸ್ಥಿರತೆ ಇದೆ. ಫೋರ್ಟಿಸ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಯತ್ನಾಳ್ ಆರೋಗ್ಯ ತಪಾಸಣೆ ನಡೆದಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ವಲ್ಪ ಬಿಪಿ ಹೆಚ್ಚಳ ಆಗಿದೆ ಅಷ್ಟೇ. ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ದೈಹಿಕ ಒತ್ತಡ ಬಿದ್ದಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.
After the commotion outside the Karnataka Assembly, BJP MLA Basangouda Patil Yatnal experienced a loss of consciousness. He has been promptly transported to the hospital for medical attention.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm