ಬ್ರೇಕಿಂಗ್ ನ್ಯೂಸ್
19-07-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ನಾಯಕರ ಧರಣಿಯಿಂದ ವಿಧಾನಸಭೆ ಬುಧವಾರ ರಣರಂಗವಾಗಿ ಬದಲಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದ ಘಟನೆಯು ನಡೆಯಿತು. ಅಸಭ್ಯ ವರ್ತನೆ ಹಿನ್ನೆಲೆ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದರಿಂದ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ಗಳು ಹೊರಹಾಕುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ತಗೊಂಡರು.
ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬುಲೆನ್ಸ್ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಿಧಾನಸೌಧದಲ್ಲಿ ತಳ್ಳಾಟ ನೂಕಾಟ ನಡೆದು ಪ್ರವೇಶ ದ್ವಾರದ ಬಾಗಿಲಿನ ಗಾಜು ಒಡೆದುಹೋಗಿವೆ.
ಬಿಪಿ ಹಠಾತ್ತನೇ ಹೆಚ್ಚಳ ಆಗಿರುವ ಕಾರಣ ಸುಸ್ತಾಗಿ ಕುಸಿದಿದ್ದಾರೆ. ಅವರಿಗೆ ಶುಗರ್ ಕೂಡ ಇರೋದರಿಂದ ಹೆಚ್ಚಿನ ಕೇರಿಂಗ್ ಅಗತ್ಯವಾಗಿದೆ. ಹೀಗಾಗಿ ಐಸಿಯೂನಲ್ಲಿ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಗೆ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಇತ್ತ ಫೋರ್ಟಿಸ್ ಆಸ್ಪತ್ರೆಯ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯದಲ್ಲಿ ಸ್ಥಿರತೆ ಇದೆ. ಫೋರ್ಟಿಸ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಯತ್ನಾಳ್ ಆರೋಗ್ಯ ತಪಾಸಣೆ ನಡೆದಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ವಲ್ಪ ಬಿಪಿ ಹೆಚ್ಚಳ ಆಗಿದೆ ಅಷ್ಟೇ. ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ದೈಹಿಕ ಒತ್ತಡ ಬಿದ್ದಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.
After the commotion outside the Karnataka Assembly, BJP MLA Basangouda Patil Yatnal experienced a loss of consciousness. He has been promptly transported to the hospital for medical attention.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 08:27 pm
HK News Staffer
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm