ಬ್ರೇಕಿಂಗ್ ನ್ಯೂಸ್
19-07-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ನಾಯಕರ ಧರಣಿಯಿಂದ ವಿಧಾನಸಭೆ ಬುಧವಾರ ರಣರಂಗವಾಗಿ ಬದಲಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದ ಘಟನೆಯು ನಡೆಯಿತು. ಅಸಭ್ಯ ವರ್ತನೆ ಹಿನ್ನೆಲೆ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದರಿಂದ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ಗಳು ಹೊರಹಾಕುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ತಗೊಂಡರು.
ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬುಲೆನ್ಸ್ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಿಧಾನಸೌಧದಲ್ಲಿ ತಳ್ಳಾಟ ನೂಕಾಟ ನಡೆದು ಪ್ರವೇಶ ದ್ವಾರದ ಬಾಗಿಲಿನ ಗಾಜು ಒಡೆದುಹೋಗಿವೆ.
ಬಿಪಿ ಹಠಾತ್ತನೇ ಹೆಚ್ಚಳ ಆಗಿರುವ ಕಾರಣ ಸುಸ್ತಾಗಿ ಕುಸಿದಿದ್ದಾರೆ. ಅವರಿಗೆ ಶುಗರ್ ಕೂಡ ಇರೋದರಿಂದ ಹೆಚ್ಚಿನ ಕೇರಿಂಗ್ ಅಗತ್ಯವಾಗಿದೆ. ಹೀಗಾಗಿ ಐಸಿಯೂನಲ್ಲಿ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಗೆ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಇತ್ತ ಫೋರ್ಟಿಸ್ ಆಸ್ಪತ್ರೆಯ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯದಲ್ಲಿ ಸ್ಥಿರತೆ ಇದೆ. ಫೋರ್ಟಿಸ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಯತ್ನಾಳ್ ಆರೋಗ್ಯ ತಪಾಸಣೆ ನಡೆದಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ವಲ್ಪ ಬಿಪಿ ಹೆಚ್ಚಳ ಆಗಿದೆ ಅಷ್ಟೇ. ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ದೈಹಿಕ ಒತ್ತಡ ಬಿದ್ದಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.
After the commotion outside the Karnataka Assembly, BJP MLA Basangouda Patil Yatnal experienced a loss of consciousness. He has been promptly transported to the hospital for medical attention.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm