ಬ್ರೇಕಿಂಗ್ ನ್ಯೂಸ್
21-07-23 05:38 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾರತದ ಅತ್ಯಂತ ಶ್ರೀಮಂತ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಸೋಸಿಯೇಷನ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್ (ಎನ್ಇಡಬ್ಲ್ಯೂ) ಸಂಸ್ಥೆಗಳು ನಡೆಸಿರುವ ಅಧ್ಯಯನ ವರದಿಗಳಲ್ಲಿ ಈ ವಿಚಾರವನ್ನು ಉಲ್ಲೇಖಿಸಿವೆ. ಡಿ.ಕೆ. ಶಿವಕುಮಾರ್ ಅವರ ಒಟ್ಟಾರೆ ಆಸ್ತಿ ಮೊತ್ತ 1,413 ಕೋಟಿ ರೂ.ಗಳಾಗಿದ್ದು, ಅವರಿಗೆ ದೇಶದ ಸಿರಿವಂತ ಶಾಸಕರೆಂಬ ಹೆಗ್ಗಳಿಕೆಯನ್ನು ತಂದಿತ್ತಿದೆ.
ಅಷ್ಟೇ ಅಲ್ಲ, ಭಾರತದ ಟಾಪ್ 3 ಸಿರಿವಂತ ಶಾಸಕರ ಪಟ್ಟಿಯಲ್ಲಿಯೂ ರಾಜ್ಯದ ಶಾಸಕರೇ ಇದ್ದು, ಸಂಸ್ಥೆಗಳು ಬಿಡುಗಡೆ ಮಾಡಿರುವ ದೇಶದ ಸಿರಿವಂತ ಶಾಸಕರ ಪಟ್ಟಿಯ ಟಾಪ್ 20ರಲ್ಲಿ 12 ಮಂದಿ ಶಾಸಕರು ರಾಜ್ಯದವರೇ ಆಗಿರುವುದು ಗಮನಾರ್ಹ.
ಈ ವರ್ಷ ನಡೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವಾಗ ರಾಜಕಾರಣಿಗಳು ಸಲ್ಲಿಸಿದ್ದ ಆಸ್ತಿ ವಿವರಗಳನ್ನು ಆಧರಿಸಿ ಈ ಪಟ್ಟಿಯನ್ನು ತಯಾರಿಸಲಾಗಿದೆ. ಅಧ್ಯಯನ ವರದಿಯ ಪ್ರಕಾರ, ರಾಜ್ಯದ ಒಟ್ಟಾರೆ ಶಾಸಕರ ಪೈಕಿ ಶೇ. 14ರಷ್ಟು ಶಾಸಕರು ಶತಕೋಟಿ ಒಡೆಯರು. ಭಾರತದ ಯಾವುದೇ ಒಂದು ರಾಜ್ಯದಲ್ಲಿ ಹೀಗೆ ಶೇಕರಾವಾರು ಲೆಕ್ಕಾಚಾರದಲ್ಲಿ ಅತಿ ಹೆಚ್ಚು ಶತಕೋಟಿ ಒಡೆಯರು ಇರುವುದು ಕರ್ನಾಟಕದಲ್ಲೇ ಎಂದು ಎಡಿಆರ್ ವರದಿ ಹೇಳಿದೆ. ಭಾರತದ ಒಟ್ಟಾರೆ ಶಾಸಕರ ಆಸ್ತಿ ಮೌಲ್ಯಗಳನ್ನು ಲೆಕ್ಕ ಹಾಕಿದರೆ ಸರಾಸರಿಯಾಗಿ ಪ್ರತಿಯೊಬ್ಬ ಶಾಸಕನು 64.3 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ 3ರಲ್ಲಿರುವ ಕರ್ನಾಟಕ ಶಾಸಕರು
ಎಡಿಆರ್ ಬಿಡುಗಡೆ ಮಾಡಿರುವ ವರದಿಯಲ್ಲಿ ಟಾಪ್ 3ರಲ್ಲಿ ರಾಜ್ಯದ ಶಾಸಕರೇ ಇದ್ದಾರೆ. ಟಾಪ್ 1ರಲ್ಲಿ ಡಿ.ಕೆ. ಶಿವಕುಮಾರ್ ಇದ್ದರೆ, ಟಾಪ್ 2ರಲ್ಲಿ ಗೌರಿ ಬಿದನೂರು ಶಾಸಕ ಎಚ್. ಕೆ. ಪುಟ್ಟಸ್ವಾಮಿ ಗೌಡ ಇದ್ದಾರೆ. ಇವರ ಆಸ್ತಿ ಮೌಲ್ಯ 1,267 ಕೋಟಿ ರೂ.ಗಳಷ್ಟಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮೂರನೇ ಸ್ಥಾನದಲ್ಲಿ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಶಾಸಕ ಪ್ರಿಯಾ ಕೃಷ್ಣ ಅವರಿದ್ದು ಅವರ ಒಟ್ಟಾರೆ ಆಸ್ತಿ ಮೌಲ್ಯ 1,156 ಕೋಟಿ ರೂ. ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
The richest MLA in the country has assets worth over ₹ 1,400 crore while an MLA from West Bengal does not have even ₹ 2,000 to his name, a report by an advocacy group has revealed. D K Shivakumar, who became Karnataka's Deputy Chief Minister after the Congress' resounding victory in the state Assembly elections in May, has assets worth ₹ 1,413 crore and the next two richest MLAs are also from the state, according to the report by the Association for Democratic Reforms (ADR).
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm