ಬ್ರೇಕಿಂಗ್ ನ್ಯೂಸ್
04-11-20 05:29 pm Bangalore Correspondent ಕರ್ನಾಟಕ
ಮೈಸೂರು, ನವೆಂಬರ್ 4: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ, ದೆಹಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅವರನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಖಂಡಿತ. ಈ ಬಗ್ಗೆ ನನಗೆ ಖಚಿತ ವಿಶ್ವಾಸವಿದೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಬದಲಾವಣೆಗೆ, ನಾನು ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಕಾರಣ ಇದ್ದಿರಬಹುದು. ಹಲವು ದಿನಗಳಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಉಪ ಚುನಾವಣೆ ನಡೆದ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಎರಡರಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿಯೂ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಂಡುಬಂದಿದ್ದು ಕಾಂಗ್ರೆಸ್ಸೇ ಗೆಲ್ಲಲಿದೆ ಎಂದಿದ್ದಾರೆ.
ರಾಜ್ಯ ಸರಕಾರ ಶಾಲೆ ಆರಂಭಿಸುವ ಚಿಂತನೆ ಮಾಡಿರುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನು ಆರಂಭಿಸೋದು ಬೇಡ. ಇದು ಸರಕಾರಕ್ಕೆ ನನ್ನ ನೀಡುತ್ತಿರುವ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಎಲ್ಲರನ್ನೂ ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ಬಳಿಕ ಶಾಲೆ ಆರಂಭಿಸಿದರೆ ಸಾಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
After the By-Elections of R R Nagar, the Chief Minister of Karnataka BS Yeddyurappa will anymore not be the cm but Karnataka will see a new cm predicts Congress leader Siddaramaiah.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm