ಬ್ರೇಕಿಂಗ್ ನ್ಯೂಸ್
04-11-20 05:29 pm Bangalore Correspondent ಕರ್ನಾಟಕ
ಮೈಸೂರು, ನವೆಂಬರ್ 4: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ, ದೆಹಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅವರನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಖಂಡಿತ. ಈ ಬಗ್ಗೆ ನನಗೆ ಖಚಿತ ವಿಶ್ವಾಸವಿದೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಬದಲಾವಣೆಗೆ, ನಾನು ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಕಾರಣ ಇದ್ದಿರಬಹುದು. ಹಲವು ದಿನಗಳಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಉಪ ಚುನಾವಣೆ ನಡೆದ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಎರಡರಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿಯೂ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಂಡುಬಂದಿದ್ದು ಕಾಂಗ್ರೆಸ್ಸೇ ಗೆಲ್ಲಲಿದೆ ಎಂದಿದ್ದಾರೆ.
ರಾಜ್ಯ ಸರಕಾರ ಶಾಲೆ ಆರಂಭಿಸುವ ಚಿಂತನೆ ಮಾಡಿರುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನು ಆರಂಭಿಸೋದು ಬೇಡ. ಇದು ಸರಕಾರಕ್ಕೆ ನನ್ನ ನೀಡುತ್ತಿರುವ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಎಲ್ಲರನ್ನೂ ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ಬಳಿಕ ಶಾಲೆ ಆರಂಭಿಸಿದರೆ ಸಾಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
After the By-Elections of R R Nagar, the Chief Minister of Karnataka BS Yeddyurappa will anymore not be the cm but Karnataka will see a new cm predicts Congress leader Siddaramaiah.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm