ಬ್ರೇಕಿಂಗ್ ನ್ಯೂಸ್
04-11-20 06:09 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 04: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಕ್ಕೀಡಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ.
ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದಿರುವ ಹೈಕೋರ್ಟ್, ಆ ಕುರಿತು ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಮತ್ತು ಸಿಐಡಿ ತನಿಖಾ ತಂಡಗಳು ಜಾರ್ಜ್ ಬಗ್ಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದು ತನಿಖಾ ತಂಡಗಳು ನೀಡಿದ್ದ ಬಿ ರಿಪೋರ್ಟನ್ನು ಜಾರ್ಜ್ ಹೈಕೋರ್ಟಿಗೆ ಸಲ್ಲಿಸಿದ್ದಾರೆ. ಇದನ್ನು ಪುರಸ್ಕರಿಸಿದ ಹೈಕೋರ್ಟ್, ಪ್ರತಿವಾದಿಗಳ ಅರ್ಜಿಯನ್ನು ತಳ್ಳಿಹಾಕಿದೆ.

ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ 2016, ಜುಲೈ 17ರಂದು ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಭಾರೀ ಶಂಕೆ ವ್ಯಕ್ತವಾಗಿತ್ತು. ಅಲ್ಲದೆ, ಸಾವಿಗೂ ಮುನ್ನ ಗಣಪತಿ, ಮಡಿಕೇರಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ, ತನಗೆ ಗೃಹ ಸಚಿವ ಕೆ.ಜೆ. ಜಾರ್ಜ್, ಹಿರಿಯ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಕಿರುಕುಳ ನೀಡುತ್ತಿದ್ದಾರೆ. ತಾನು ಸಾವನ್ನಪ್ಪಿದರೆ ಅದಕ್ಕೆ ಅವರೇ ಹೊಣೆ ಎಂದು ಹೇಳಿಕೆ ನೀಡಿದ್ದರು. ಅದೇ ದಿನ ಸಂಜೆ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ನಿಗೂಢ ಸಾವು ಕಂಡಿದ್ದರು. ಪ್ರಕರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತಲ್ಲದೆ ಮಂಗಳೂರಿನ ಚರ್ಚ್ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಕೆ.ಜೆ. ಜಾರ್ಜ್, ಡಿವೈಎಸ್ಪಿ ಗಣಪತಿಗೆ ಕಿರುಕುಳ ನೀಡುತ್ತಿದ್ದರೇ ಎಂಬ ಅನುಮಾನ ಕೇಳಿಬಂದಿತ್ತು.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm