ಬ್ರೇಕಿಂಗ್ ನ್ಯೂಸ್
04-11-20 06:09 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 04: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಕ್ಕೀಡಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ.
ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದಿರುವ ಹೈಕೋರ್ಟ್, ಆ ಕುರಿತು ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಮತ್ತು ಸಿಐಡಿ ತನಿಖಾ ತಂಡಗಳು ಜಾರ್ಜ್ ಬಗ್ಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದು ತನಿಖಾ ತಂಡಗಳು ನೀಡಿದ್ದ ಬಿ ರಿಪೋರ್ಟನ್ನು ಜಾರ್ಜ್ ಹೈಕೋರ್ಟಿಗೆ ಸಲ್ಲಿಸಿದ್ದಾರೆ. ಇದನ್ನು ಪುರಸ್ಕರಿಸಿದ ಹೈಕೋರ್ಟ್, ಪ್ರತಿವಾದಿಗಳ ಅರ್ಜಿಯನ್ನು ತಳ್ಳಿಹಾಕಿದೆ.

ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ 2016, ಜುಲೈ 17ರಂದು ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಭಾರೀ ಶಂಕೆ ವ್ಯಕ್ತವಾಗಿತ್ತು. ಅಲ್ಲದೆ, ಸಾವಿಗೂ ಮುನ್ನ ಗಣಪತಿ, ಮಡಿಕೇರಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ, ತನಗೆ ಗೃಹ ಸಚಿವ ಕೆ.ಜೆ. ಜಾರ್ಜ್, ಹಿರಿಯ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಕಿರುಕುಳ ನೀಡುತ್ತಿದ್ದಾರೆ. ತಾನು ಸಾವನ್ನಪ್ಪಿದರೆ ಅದಕ್ಕೆ ಅವರೇ ಹೊಣೆ ಎಂದು ಹೇಳಿಕೆ ನೀಡಿದ್ದರು. ಅದೇ ದಿನ ಸಂಜೆ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ನಿಗೂಢ ಸಾವು ಕಂಡಿದ್ದರು. ಪ್ರಕರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತಲ್ಲದೆ ಮಂಗಳೂರಿನ ಚರ್ಚ್ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಕೆ.ಜೆ. ಜಾರ್ಜ್, ಡಿವೈಎಸ್ಪಿ ಗಣಪತಿಗೆ ಕಿರುಕುಳ ನೀಡುತ್ತಿದ್ದರೇ ಎಂಬ ಅನುಮಾನ ಕೇಳಿಬಂದಿತ್ತು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm