ಬ್ರೇಕಿಂಗ್ ನ್ಯೂಸ್
28-07-23 03:12 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28: ಪ್ರಿಯಕರ ತನ್ನನ್ನು ನಾಯಿ ತರ ಟ್ರೀಟ್ ಮಾಡ್ತಿದ್ದಾನೆ, ಹುಡುಗಿಯರು ಯಾರು ಕೂಡ ಇನ್ಮುಂದೆ ಲವ್ ಮಾಡಬೇಡಿ.. ಎಂದು ಡೆತ್ ನೋಟ್ ಬರೆದಿಟ್ಟು ಮಾಡೆಲ್ ಆಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಜುಲೈ 21ರಂದು ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ಮಾಡೆಲ್ ಕೂಡ ಆಗಿದ್ದ ವಿದ್ಯಾಶ್ರೀ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಪ್ರಿಯಕರನೇ ಕಾರಣ ಎನ್ನುವ ಅಂಶ ಆಕೆಯ ಡೈರಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾಶ್ರೀ ಡೈರಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಪ್ರಿಯಕರ ಅಕ್ಷಯ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಡೆತ್ನೋಟ್ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಯುವತಿ ಮನೆಯಲ್ಲಿ ನಾಲ್ಕು ದಿನಗಳ ಬಳಿಕ ಜುಲೈ 26ರಂದು ಡೆತ್ನೋಟ್ ಪತ್ತೆಯಾಗಿದ್ದು ಇದರ ಬೆನ್ನಲ್ಲೇ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಅಕ್ಷಯ್ನನ್ನ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಐಟಿ ಉದ್ಯೋಗ ಮತ್ತು ಮಾಡೆಲಿಂಗ್ ಮಾಡುತ್ತಿದ್ದ ವಿದ್ಯಾ ಮತ್ತು ಅಕ್ಷಯ್ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ, ಅಕ್ಷಯ್ ವಿದ್ಯಾಳಿಂದ 1.76 ಲಕ್ಷ ಹಣ ಪಡೆದುಕೊಂಡಿದ್ದ. ಕೊಟ್ಟ ಹಣ ಕೇಳಿದ್ದಕ್ಕೆ ವಿದ್ಯಾ ಮತ್ತು ಆಕೆಯ ಕುಟುಂಬದವರನ್ನ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನನ್ನ ಸಾವಿಗೆ ಅಕ್ಷಯ್ ಕಾರಣ. ಅವನು ನನ್ನ ನಾಯಿತರ ಟ್ರೀಟ್ ಮಾಡುತ್ತಾ ಇದ್ದಾನೆ. ನನಗೆ ಕೊಡಬೇಕಾದ 1 ಲಕ್ಷದ 76 ಸಾವಿರ ದುಡ್ಡು ಕೇಳಿದರೆ, ನನಗೆ ಮತ್ತು ನನ್ನ ಪ್ಯಾಮಿಲಿಗೆ ಕೆಟ್ಟ ಕೆಟ್ಟ ಮಾತಲ್ಲಿ ಬೈದು ಪೋನ್ ಸ್ವಿಚ್ ಆಫ್ ಮಾಡಿದ್ದಾನೆ. ನನ್ನ ಡಿಪ್ರೆಷನ್ಗೆ ಹೋಗುವಂತೆ ಮಾಡಿದ್ದಾನೆ. ಹೀಗಾಗಿ ನನಗೆ ಬದುಕಲು ಆಗುತ್ತಿಲ್ಲ. ಡೇ ಬೈ ಡೇ ನನಗೆ ತುಂಬಾ ಸ್ಟೇನ್ ಆಗುತ್ತಿದೆ. ಅಮ್ಮ ಗುರು ಮನು I am Sorry ದಯವಿಟ್ಟು ನನ್ನ ಕ್ಷಮಿಸಿ. ಎಲ್ಲಾ ಹುಡುಗಿಯಲ್ಲಿ ವಿನಂತಿ ದಯಬಿಟ್ಟು ಯಾರು ಲವ್ ಮಾಡಬೇಡಿ. Good bye this World ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Bangalore model commits suicide says accused boyfriend treated her like a dog, arrested. Vidyashree committed suicide in Kempapura area of Bengaluru North Taluk on July 21. Police said that the model wrote in her diary that the "accused treated her like a dog". She claimed that whenever she asked him to return her money, the accused would abuse her family members and she couldn't live with the humiliation
23-08-25 09:56 pm
Bangalore Correspondent
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 06:21 pm
Mangaluru Correspondent
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm