ಬ್ರೇಕಿಂಗ್ ನ್ಯೂಸ್
29-07-23 04:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಕಾಶಿ ಯಾತ್ರೆ ಕೈಗೊಳ್ಳುವ ಭಕ್ತರಿಗಾಗಿ ರಾಜ್ಯದಿಂದ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಹೆಸರಿನ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಯಶವಂತಪುರ ರೈಲ್ವೇ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು ವಾರಣಾಸಿ, ಅಯೋಧ್ಯೆ, ಪ್ರಯಾಗ್ ರಾಜ್ ದರ್ಶನ ಮಾಡಲಿರುವ ಯಾತ್ರಿಗಳನ್ನು ಕರೆದೊಯ್ಯಲಿದೆ. 8 ದಿನಗಳ ಕಾಶಿ ಯಾತ್ರೆ ಪ್ರವಾಸಕ್ಕೆ ಒಬ್ಬರಿಗೆ 20 ಸಾವಿರ ರೂ. ದರ ನಿಗದಿ ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಸಬ್ಸಿಡಿ ಸಿಗಲಿದೆ. ಊಟ, ವಸತಿ ವ್ಯವಸ್ಥೆ ಇದರಲ್ಲಿ ಒಳಗೊಳ್ಳಲಿದೆ. 700 ಸೀಟ್ ಸಾಮರ್ಥ್ಯ ಹೊಂದಿರುವ ರೈಲಿನಲ್ಲಿ ಈಗಾಗಲೇ 403 ಸೀಟ್ ಬುಕ್ಕಿಂಗ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
ಯಶವಂತಪುರ ರೈಲು ನಿಲ್ದಾಣದಿಂದ ಕಾಶಿಗೆ ತಲುಪಲು ಎರಡು ದಿನ ಬೇಕಾಗುತ್ತದೆ. ವಾರಣಾಸಿಗೆ ತಲುಪಿದ ಬಳಿಕ ಗಂಗಾ ಸ್ನಾನ, ತುಳಸಿ ಮಂದಿರ ದರ್ಶನ, ಶ್ರೀ ಹನುಮಾನ್ ದರ್ಶನ, ಕಾಶಿ ವಿಶ್ವನಾಥ ದರ್ಶನ ಪಡೆದ ಬಳಿಕ ಒಂದು ದಿನ ಕಾಶಿಯಲ್ಲಿ ವಾಸ ಇರಲಿದೆ. ಬಳಿಕ 5ನೇ ದಿನ ವಾರಣಾಸಿಯಿಂದ ಆಯೋಧ್ಯೆಗೆ ತೆರಳಿ ಶ್ರೀರಾಮ ಭೂಮಿ ದರ್ಶನ ಮಾಡಿ, ಸಂಜೆ ಸರಯೂ ಆರತಿ ವೀಕ್ಷಣೆ ಮಾಡುವ ವ್ಯವಸ್ಥೆ ಇರಲಿದೆ. 6ನೇ ದಿನ ಪ್ರಯಾಗ್ ರಾಜ್ ರೈಲು ತಲುಪಲಿದೆ. ಬಳಿಕ ತ್ರಿವೇಣಿ ಸಂಗಮ ಸ್ನಾನ, ಶ್ರೀ ಹನುಮಾನ್ ಮಂದಿರ ದರ್ಶನ ಇರಲಿದೆ. ಅದೇ ದಿನ ಪ್ರಯಾಗ್ ರಾಜ್ನಿಂದ ಬೆಂಗಳೂರಿಗೆ ರೈಲು ಹೊರಡಲಿದೆ ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಕಾಶಿಯಾತ್ರೆಯ ಮೂರು ಟ್ರಿಪ್ ಮುಗಿದಿದೆ. ಇದು ನಾಲ್ಕನೇ ಟ್ರಿಪ್ ಇದಾಗಿದೆ. ರೈಲಿನಲ್ಲಿ ರಾಜ್ಯ ಆರೋಗ್ಯ ಇಲಾಖೆಯ ಇಬ್ಬರು ವೈದ್ಯರು ಇರಲಿದ್ದಾರೆ. ಆಗಸ್ಟ್ 15ಕ್ಕೆ ಮತ್ತೆ 5ನೇ ಕಾಶಿಯಾತ್ರೆ ಆರಂಭವಾಗಲಿದೆ. ಯಶವಂತಪುರ, ದಾವಣಗೆರೆ, ಬೀರೂರು, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಹಾಗೂ ರಾಯಭಾಗದಲ್ಲಿ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
The Muzrai Department of the Karnataka goverment has made special train arrangements to Kashi from Karnataka. Muzrai Minister Ramalinga Reddy at Yeshwanthpur railway station flagged off the fourth train that left for Kashi from Karnataka. The ticket price for the Karnataka Bharat Gaurav Kashi Yatra train is Rs 20,000 but the goverment is giving a Rs 5,000 subsidy to people travelling on these trains.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 06:05 pm
Mangalore Correspondent
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
12-02-25 06:23 pm
Bangalore Correspondent
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm