ಬ್ರೇಕಿಂಗ್ ನ್ಯೂಸ್
29-07-23 04:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಕಾಶಿ ಯಾತ್ರೆ ಕೈಗೊಳ್ಳುವ ಭಕ್ತರಿಗಾಗಿ ರಾಜ್ಯದಿಂದ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಹೆಸರಿನ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಯಶವಂತಪುರ ರೈಲ್ವೇ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು ವಾರಣಾಸಿ, ಅಯೋಧ್ಯೆ, ಪ್ರಯಾಗ್ ರಾಜ್ ದರ್ಶನ ಮಾಡಲಿರುವ ಯಾತ್ರಿಗಳನ್ನು ಕರೆದೊಯ್ಯಲಿದೆ. 8 ದಿನಗಳ ಕಾಶಿ ಯಾತ್ರೆ ಪ್ರವಾಸಕ್ಕೆ ಒಬ್ಬರಿಗೆ 20 ಸಾವಿರ ರೂ. ದರ ನಿಗದಿ ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಸಬ್ಸಿಡಿ ಸಿಗಲಿದೆ. ಊಟ, ವಸತಿ ವ್ಯವಸ್ಥೆ ಇದರಲ್ಲಿ ಒಳಗೊಳ್ಳಲಿದೆ. 700 ಸೀಟ್ ಸಾಮರ್ಥ್ಯ ಹೊಂದಿರುವ ರೈಲಿನಲ್ಲಿ ಈಗಾಗಲೇ 403 ಸೀಟ್ ಬುಕ್ಕಿಂಗ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಯಶವಂತಪುರ ರೈಲು ನಿಲ್ದಾಣದಿಂದ ಕಾಶಿಗೆ ತಲುಪಲು ಎರಡು ದಿನ ಬೇಕಾಗುತ್ತದೆ. ವಾರಣಾಸಿಗೆ ತಲುಪಿದ ಬಳಿಕ ಗಂಗಾ ಸ್ನಾನ, ತುಳಸಿ ಮಂದಿರ ದರ್ಶನ, ಶ್ರೀ ಹನುಮಾನ್ ದರ್ಶನ, ಕಾಶಿ ವಿಶ್ವನಾಥ ದರ್ಶನ ಪಡೆದ ಬಳಿಕ ಒಂದು ದಿನ ಕಾಶಿಯಲ್ಲಿ ವಾಸ ಇರಲಿದೆ. ಬಳಿಕ 5ನೇ ದಿನ ವಾರಣಾಸಿಯಿಂದ ಆಯೋಧ್ಯೆಗೆ ತೆರಳಿ ಶ್ರೀರಾಮ ಭೂಮಿ ದರ್ಶನ ಮಾಡಿ, ಸಂಜೆ ಸರಯೂ ಆರತಿ ವೀಕ್ಷಣೆ ಮಾಡುವ ವ್ಯವಸ್ಥೆ ಇರಲಿದೆ. 6ನೇ ದಿನ ಪ್ರಯಾಗ್ ರಾಜ್ ರೈಲು ತಲುಪಲಿದೆ. ಬಳಿಕ ತ್ರಿವೇಣಿ ಸಂಗಮ ಸ್ನಾನ, ಶ್ರೀ ಹನುಮಾನ್ ಮಂದಿರ ದರ್ಶನ ಇರಲಿದೆ. ಅದೇ ದಿನ ಪ್ರಯಾಗ್ ರಾಜ್ನಿಂದ ಬೆಂಗಳೂರಿಗೆ ರೈಲು ಹೊರಡಲಿದೆ ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಕಾಶಿಯಾತ್ರೆಯ ಮೂರು ಟ್ರಿಪ್ ಮುಗಿದಿದೆ. ಇದು ನಾಲ್ಕನೇ ಟ್ರಿಪ್ ಇದಾಗಿದೆ. ರೈಲಿನಲ್ಲಿ ರಾಜ್ಯ ಆರೋಗ್ಯ ಇಲಾಖೆಯ ಇಬ್ಬರು ವೈದ್ಯರು ಇರಲಿದ್ದಾರೆ. ಆಗಸ್ಟ್ 15ಕ್ಕೆ ಮತ್ತೆ 5ನೇ ಕಾಶಿಯಾತ್ರೆ ಆರಂಭವಾಗಲಿದೆ. ಯಶವಂತಪುರ, ದಾವಣಗೆರೆ, ಬೀರೂರು, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಹಾಗೂ ರಾಯಭಾಗದಲ್ಲಿ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
The Muzrai Department of the Karnataka goverment has made special train arrangements to Kashi from Karnataka. Muzrai Minister Ramalinga Reddy at Yeshwanthpur railway station flagged off the fourth train that left for Kashi from Karnataka. The ticket price for the Karnataka Bharat Gaurav Kashi Yatra train is Rs 20,000 but the goverment is giving a Rs 5,000 subsidy to people travelling on these trains.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 02:47 pm
HK News Staffer
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm