ಬ್ರೇಕಿಂಗ್ ನ್ಯೂಸ್
02-08-23 04:57 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 2: ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿ ಪೇಚಿಗೆ ಸಿಲುಕಿದ್ದಾರೆ.
ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಸ್ಥಳೀಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆರಗ ಜ್ಞಾನೇಂದ್ರ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡಿದರೆ ಮಲೆನಾಡು ಭಾಗಕ್ಕೆ ಆಗಬಹುದಾದ ದುಷ್ಪರಿಣಾಮ ಏನು ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿರಬೇಕು. ಇದಕ್ಕೆ ಸರಿಯಾಗಿ ಕಾಡಿನ ಬಗ್ಗೆ ಅರಿವೇ ಇರದಂತಹ ಜನಪ್ರತಿನಿಧಿಯನ್ನು ಅರಣ್ಯ ಸಚಿವರನ್ನಾಗಿ ಮಾಡಿದ್ದಾರೆ.

ಅವರಿಗೆಲ್ಲ ಮರ, ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ. ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ. ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ... ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯದ ಮಾತನ್ನಾಡಿದ್ದಾರೆ.
ಮಾಜಿ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು, ಪರಿಶಿಷ್ಟ ಜಾತಿಗೆ ಸೇರಿದ ಮಲ್ಲಿಕಾರ್ಜುನ ಖರ್ಗೆಯವರನ್ನು ಅನಗತ್ಯವಾಗಿ ಟೀಕಿಸಿದ್ದು ಪೇಚಿಗೆ ಸಿಲುಕುವಂತಾಗಿದೆ. ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು ಈ ರೀತಿಯ ಹೇಳಿಕೆ ಕೊಟ್ಟವರನ್ನು ನಿಮ್ಹಾನ್ಸ್ ಸೇರಿಸಬೇಕೆಂದು ಹೇಳಿದ್ದಾರೆ.
Former Home Minister and senior BJP leader Araga Jnanendra has made an objectionable comment on All India Congress Committee (AICC) president Mallikarjun Kharge during a protest against Forest Minister Eshwar Khandre for his statement on the K. Kasturirangan report.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm