ಬ್ರೇಕಿಂಗ್ ನ್ಯೂಸ್
03-08-23 10:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಅಯೋಧ್ಯೆ ರಾಮಮಂದಿರ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ಕೇಂದ್ರ ಸರ್ಕಾರ ಮುಸ್ಲಿಮರಿಗೆ ಟೆಂಡರ್ ನೀಡಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳ ಬಳಿಕ ರಾಮಮಂದಿರ ನಿರ್ಮಾಣ ಸಾಧ್ಯವಾಗ್ತಿದೆ. ಇದಕ್ಕೆ ತೊಡಕಾಗಿದ್ದು ಮುಸ್ಲಿಮರು. ಕೋರ್ಟ್ ಆದೇಶದ ಬಳಿಕವೂ ನಾವು ಅಲ್ಲೇ ಮಸೀದಿ ನಿರ್ಮಾಣ ಮಾಡ್ತೀವಿ ಅಂತ ಹೇಳ್ತಾರೆ. ಈ ರೀತಿ ಇರಬೇಕಾದ್ರೆ ಮುಸ್ಲಿಮರಿಗೆ ಈಗ ಕಟ್ಟಡ ನಿರ್ಮಾಣದ ಟೆಂಡರ್ ನೀಡಲಾಗಿದೆ. ಕೇಂದ್ರ ಸರ್ಕಾರ ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿದೆ. ಈಗ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್ ನೀಡಿರುವುದು ಖಂಡನೀಯ ಎಂದರು.
ರಾಜಸ್ತಾನ ಮೂಲದ ಕಂಪನಿಯ ಇಕ್ಬಾಲ್ ಮಿಸ್ತ್ರಿ ಎಂಬಾತನಿಂದ ಕಟ್ಟಡ ಕೆಲಸ ನಡೆಯುತ್ತಿದೆ. ಗರ್ಭಗುಡಿ ನಿರ್ಮಾಣದ ಟೆಂಡರ್ ಈತನಿಗೆ ನೀಡಲಾಗಿದೆ. ಇದು 100 ಕೋಟಿ ಹಿಂದೂಗಳಿಗೆ ಮಾಡಿರುವ ಅವಮಾನ. ಟ್ರಸ್ಟಿಗಳಲ್ಲಿ ಒಬ್ಬರಾದ ಪೇಜಾವರ ಶ್ರೀಗಳಿಗೆ ಈ ಬಗ್ಗೆ ಮನವಿ ಮಾಡಿದ್ದೇವೆ. ಅಲ್ಲಿರುವಂತಹ ಮುಸ್ಲಿಂ ಕೆಲಸಗಾರರನ್ನು ಹೊರ ಹಾಕಬೇಕು. ಅಲ್ಲಾ ಒಬ್ಬನೇ ದೇವರು ಅನ್ನುವವನಿಗೆ ರಾಮನ ಗುಡಿ ನಿರ್ಮಾಣಕ್ಕೆ ಅವಕಾಶ ಕೊಟ್ಟಿದ್ದು ಹೇಗೆ ಎಂದು ಪ್ರಶ್ನಿಸಿದರು.
ಗೋಮಾಂಸ ಭಕ್ಷಕರು, ದೇವರನ್ನ ನಂಬದವರಿಗೆ ಹೇಗೆ ಗುತ್ತಿಗೆ ಕೊಟ್ಟಿದ್ದೀರಿ. ಅವರನ್ನ ಕೂಡಲೇ ವಾಪಸ್ ಕಳಿಸಬೇಕು. ಅವರು ವಾಪಸ್ ಆದ ಬಳಿಕ ನಾವು ಅಲ್ಲಿಗೆ ಹೋಗಿ ಶುದ್ಧಿ ಮಾಡ್ತೇವೆ. ಈ ಬಗ್ಗೆ ಶ್ರೀಗಳಿಗೆ ಮನವಿ ಮಾಡಲಾಗಿದೆ. ಕೂಡಲೇ ಅಲ್ಲಿರುವ ಗುತ್ತಿಗೆದಾರ ಮುಸ್ಲಿಮರನ್ನ ಹೊರ ಹಾಕಬೇಕು. ಇದು ಇಡೀ ವಿಶ್ವಕರ್ಮ ಸಮಾಜಕ್ಕೆ ಅಪಮಾನ ಮಾಡಿದ ಹಾಗೆ ಎಂದು ತಿಳಿಸಿದರು.
ಟೆಂಡರ್ ರದ್ದಾಗದಿದ್ರೆ ದೇಶಾದ್ಯಂತ ಆಂದೋಲನ ಶುರು ಮಾಡುತ್ತೇವೆ. ಈಗಾಗಲೇ ಈ ಬಗ್ಗೆ 12 ರಾಜ್ಯಗಳ ಜೊತೆ ಚರ್ಚಿಸಿದ್ದೇವೆ. 12 ರಾಜ್ಯದ ಹಿಂದು ಸಂಘಟನೆಗಳು ನಮಗೆ ಬೆಂಬಲ ಸೂಚಿಸಿದ್ದಾರೆ. ಟೆಂಡರ್ ರದ್ದು ಮಾಡದಿದ್ರೆ ರಾಮಮಂದಿರ ಉದ್ಘಾಟನೆ ಮಾಡುವುದಕ್ಕೆ ಬಿಡಲ್ಲ ಎಚ್ಚರಿಸಿದರು.
Sri Ram Sena national president Pramod Muthalik has stirred a controversy by demanding the termination of Muslim workers and contractors appointed to carry out construction of the Ram temple at Ayodhya.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm