ಬ್ರೇಕಿಂಗ್ ನ್ಯೂಸ್
03-08-23 10:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಅಯೋಧ್ಯೆ ರಾಮಮಂದಿರ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ಕೇಂದ್ರ ಸರ್ಕಾರ ಮುಸ್ಲಿಮರಿಗೆ ಟೆಂಡರ್ ನೀಡಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳ ಬಳಿಕ ರಾಮಮಂದಿರ ನಿರ್ಮಾಣ ಸಾಧ್ಯವಾಗ್ತಿದೆ. ಇದಕ್ಕೆ ತೊಡಕಾಗಿದ್ದು ಮುಸ್ಲಿಮರು. ಕೋರ್ಟ್ ಆದೇಶದ ಬಳಿಕವೂ ನಾವು ಅಲ್ಲೇ ಮಸೀದಿ ನಿರ್ಮಾಣ ಮಾಡ್ತೀವಿ ಅಂತ ಹೇಳ್ತಾರೆ. ಈ ರೀತಿ ಇರಬೇಕಾದ್ರೆ ಮುಸ್ಲಿಮರಿಗೆ ಈಗ ಕಟ್ಟಡ ನಿರ್ಮಾಣದ ಟೆಂಡರ್ ನೀಡಲಾಗಿದೆ. ಕೇಂದ್ರ ಸರ್ಕಾರ ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿದೆ. ಈಗ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್ ನೀಡಿರುವುದು ಖಂಡನೀಯ ಎಂದರು.
ರಾಜಸ್ತಾನ ಮೂಲದ ಕಂಪನಿಯ ಇಕ್ಬಾಲ್ ಮಿಸ್ತ್ರಿ ಎಂಬಾತನಿಂದ ಕಟ್ಟಡ ಕೆಲಸ ನಡೆಯುತ್ತಿದೆ. ಗರ್ಭಗುಡಿ ನಿರ್ಮಾಣದ ಟೆಂಡರ್ ಈತನಿಗೆ ನೀಡಲಾಗಿದೆ. ಇದು 100 ಕೋಟಿ ಹಿಂದೂಗಳಿಗೆ ಮಾಡಿರುವ ಅವಮಾನ. ಟ್ರಸ್ಟಿಗಳಲ್ಲಿ ಒಬ್ಬರಾದ ಪೇಜಾವರ ಶ್ರೀಗಳಿಗೆ ಈ ಬಗ್ಗೆ ಮನವಿ ಮಾಡಿದ್ದೇವೆ. ಅಲ್ಲಿರುವಂತಹ ಮುಸ್ಲಿಂ ಕೆಲಸಗಾರರನ್ನು ಹೊರ ಹಾಕಬೇಕು. ಅಲ್ಲಾ ಒಬ್ಬನೇ ದೇವರು ಅನ್ನುವವನಿಗೆ ರಾಮನ ಗುಡಿ ನಿರ್ಮಾಣಕ್ಕೆ ಅವಕಾಶ ಕೊಟ್ಟಿದ್ದು ಹೇಗೆ ಎಂದು ಪ್ರಶ್ನಿಸಿದರು.
ಗೋಮಾಂಸ ಭಕ್ಷಕರು, ದೇವರನ್ನ ನಂಬದವರಿಗೆ ಹೇಗೆ ಗುತ್ತಿಗೆ ಕೊಟ್ಟಿದ್ದೀರಿ. ಅವರನ್ನ ಕೂಡಲೇ ವಾಪಸ್ ಕಳಿಸಬೇಕು. ಅವರು ವಾಪಸ್ ಆದ ಬಳಿಕ ನಾವು ಅಲ್ಲಿಗೆ ಹೋಗಿ ಶುದ್ಧಿ ಮಾಡ್ತೇವೆ. ಈ ಬಗ್ಗೆ ಶ್ರೀಗಳಿಗೆ ಮನವಿ ಮಾಡಲಾಗಿದೆ. ಕೂಡಲೇ ಅಲ್ಲಿರುವ ಗುತ್ತಿಗೆದಾರ ಮುಸ್ಲಿಮರನ್ನ ಹೊರ ಹಾಕಬೇಕು. ಇದು ಇಡೀ ವಿಶ್ವಕರ್ಮ ಸಮಾಜಕ್ಕೆ ಅಪಮಾನ ಮಾಡಿದ ಹಾಗೆ ಎಂದು ತಿಳಿಸಿದರು.
ಟೆಂಡರ್ ರದ್ದಾಗದಿದ್ರೆ ದೇಶಾದ್ಯಂತ ಆಂದೋಲನ ಶುರು ಮಾಡುತ್ತೇವೆ. ಈಗಾಗಲೇ ಈ ಬಗ್ಗೆ 12 ರಾಜ್ಯಗಳ ಜೊತೆ ಚರ್ಚಿಸಿದ್ದೇವೆ. 12 ರಾಜ್ಯದ ಹಿಂದು ಸಂಘಟನೆಗಳು ನಮಗೆ ಬೆಂಬಲ ಸೂಚಿಸಿದ್ದಾರೆ. ಟೆಂಡರ್ ರದ್ದು ಮಾಡದಿದ್ರೆ ರಾಮಮಂದಿರ ಉದ್ಘಾಟನೆ ಮಾಡುವುದಕ್ಕೆ ಬಿಡಲ್ಲ ಎಚ್ಚರಿಸಿದರು.
Sri Ram Sena national president Pramod Muthalik has stirred a controversy by demanding the termination of Muslim workers and contractors appointed to carry out construction of the Ram temple at Ayodhya.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm