ಬ್ರೇಕಿಂಗ್ ನ್ಯೂಸ್
07-08-23 02:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಕೃಷಿ ಸಚಿವ ಚಲುರಾಯಸ್ವಾಮಿ ವಿರುದ್ದ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳೇ ತಿರುಗಿ ಬಿದ್ದಿದ್ದು, ಸಚಿವರು 6-8 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವರು ಲಂಚ ನೀಡುವಂತೆ ಮೇಲಾಧಿಕಾರಿಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ಈ ಲಂಚಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ವಿಷ ಕುಡಿಯುವುದಾಗಿ ಏಳು ಮಂದಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಆತಂಕ ಹೇಳಿಕೊಂಡಿದ್ದಾರೆ.
ಅಧಿಕಾರಿಗಳ ದೂರಿನ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಆಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ಶಾಸಕಾಂಗ ಸಭೆ ನಡೆಸುವಂತೆ ಹಲವು ಶಾಸಕರು ಪತ್ರ ಬರೆದಿದ್ದರು. ಅದರಲ್ಲಿ ಹಲವು ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದೂ ನಡೆದಿತ್ತು. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಉಂಟಾದ ಈ ಅಸಮಾಧಾನದ ಹೊಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ಪಿ ಸಭೆ ಕರೆದು ಶಮನಗೊಳಿಸುವ ಪ್ರಯತ್ನ ನಡೆಸಿದ್ದರು. ಇದೀಗ ಪ್ರಮುಖ ಸಚಿವರೊಬ್ಬರ ವಿರುದ್ಧ ಅಧಿಕಾರಿಗಳೇ ರಾಜ್ಯಪಾಲರಿಗೆ ದೂರು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
Officers file complaint against Chaluvaraya Swamy to karnataka governor.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm