ಬ್ರೇಕಿಂಗ್ ನ್ಯೂಸ್
07-08-23 02:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಕೃಷಿ ಸಚಿವ ಚಲುರಾಯಸ್ವಾಮಿ ವಿರುದ್ದ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳೇ ತಿರುಗಿ ಬಿದ್ದಿದ್ದು, ಸಚಿವರು 6-8 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವರು ಲಂಚ ನೀಡುವಂತೆ ಮೇಲಾಧಿಕಾರಿಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ಈ ಲಂಚಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ವಿಷ ಕುಡಿಯುವುದಾಗಿ ಏಳು ಮಂದಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಆತಂಕ ಹೇಳಿಕೊಂಡಿದ್ದಾರೆ.
ಅಧಿಕಾರಿಗಳ ದೂರಿನ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಆಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ಶಾಸಕಾಂಗ ಸಭೆ ನಡೆಸುವಂತೆ ಹಲವು ಶಾಸಕರು ಪತ್ರ ಬರೆದಿದ್ದರು. ಅದರಲ್ಲಿ ಹಲವು ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದೂ ನಡೆದಿತ್ತು. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಉಂಟಾದ ಈ ಅಸಮಾಧಾನದ ಹೊಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ಪಿ ಸಭೆ ಕರೆದು ಶಮನಗೊಳಿಸುವ ಪ್ರಯತ್ನ ನಡೆಸಿದ್ದರು. ಇದೀಗ ಪ್ರಮುಖ ಸಚಿವರೊಬ್ಬರ ವಿರುದ್ಧ ಅಧಿಕಾರಿಗಳೇ ರಾಜ್ಯಪಾಲರಿಗೆ ದೂರು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
Officers file complaint against Chaluvaraya Swamy to karnataka governor.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm