ಬ್ರೇಕಿಂಗ್ ನ್ಯೂಸ್
07-08-23 02:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಕೃಷಿ ಸಚಿವ ಚಲುರಾಯಸ್ವಾಮಿ ವಿರುದ್ದ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳೇ ತಿರುಗಿ ಬಿದ್ದಿದ್ದು, ಸಚಿವರು 6-8 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವರು ಲಂಚ ನೀಡುವಂತೆ ಮೇಲಾಧಿಕಾರಿಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ಈ ಲಂಚಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ವಿಷ ಕುಡಿಯುವುದಾಗಿ ಏಳು ಮಂದಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಆತಂಕ ಹೇಳಿಕೊಂಡಿದ್ದಾರೆ.
ಅಧಿಕಾರಿಗಳ ದೂರಿನ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಆಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ಶಾಸಕಾಂಗ ಸಭೆ ನಡೆಸುವಂತೆ ಹಲವು ಶಾಸಕರು ಪತ್ರ ಬರೆದಿದ್ದರು. ಅದರಲ್ಲಿ ಹಲವು ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದೂ ನಡೆದಿತ್ತು. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಉಂಟಾದ ಈ ಅಸಮಾಧಾನದ ಹೊಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ಪಿ ಸಭೆ ಕರೆದು ಶಮನಗೊಳಿಸುವ ಪ್ರಯತ್ನ ನಡೆಸಿದ್ದರು. ಇದೀಗ ಪ್ರಮುಖ ಸಚಿವರೊಬ್ಬರ ವಿರುದ್ಧ ಅಧಿಕಾರಿಗಳೇ ರಾಜ್ಯಪಾಲರಿಗೆ ದೂರು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
Officers file complaint against Chaluvaraya Swamy to karnataka governor.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm