ಬ್ರೇಕಿಂಗ್ ನ್ಯೂಸ್
08-08-23 07:10 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡುವೆ ಟ್ವೀಟ್ ವಾರ್ ಜೋರಾಗಿದೆ. ಸೋಮವಾರ ಮಧ್ಯರಾತ್ರಿ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ನಕಲಿ ಸಂವಿಧಾನ ತಜ್ಞ ಎಂದು ಕರೆದಿದ್ದರೆ, ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕೃಷಿ ಸಚಿವ ಚಲುವರಾಯ ಸ್ವಾಮಿ ಅವರ ವಿರುದ್ಧ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಈ ಪತ್ರವೇ ನಕಲಿ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶದಿಂದ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಮಾನಗೇಡಿ ಕೃತ್ಯಗಳನ್ನು ಸಮರ್ಥಿಸುವ ಲಜ್ಜೆಗೇಡಿ ಮುಖ್ಯಮಂತ್ರಿ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು ಮಾನಸಿಕ ಅಸ್ವಸ್ಥತೆಯಿಂದ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
ಸಿದ್ದರಾಮಯ್ಯ ಅವರ ಮೇಲೆ ಎಚ್.ಡಿ.ಕೆ. ಮಾಡಿದ ವಾಗ್ದಾಳಿ ಏನೇನು?
ಇದಕ್ಕೆ ಸಿದ್ದರಾಮಯ್ಯ ಅವರು ನೀಡಿದ ಪ್ರತಿಕ್ರಿಯೆ ಏನು?
ಸನ್ಮಾನ್ಯ @hd_kumaraswamy ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಸನ್ಮಾನ್ಯ @hd_kumaraswamy ಅವರೇ,
— Siddaramaiah (@siddaramaiah) August 8, 2023
ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.
ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.
ಇನ್ನು ನೀವು… https://t.co/dXtacPzEHE
Tweet War Between Siddaramaiah and HD Kumaraswamy Continues.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm