ಬ್ರೇಕಿಂಗ್ ನ್ಯೂಸ್
            
                        16-08-23 09:54 pm Bangalore Correspondent ಕರ್ನಾಟಕ
            ಬೆಂಗಳೂರು, ಆಗಸ್ಟ್ 16: ಕಟ್ಟಡವೊಂದಕ್ಕೆ 23 ಕಿಲೋವಾಟ್ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಲು 3.5 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಸ್–1 ಜಯನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಧನಂಜಯ ಮತ್ತು ಅವರ ಪರವಾಗಿ ಹಣ ಪಡೆದ ಸೈಯದ್ ನಿಜಾಮ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಟ್ಟಡವೊಂದಕ್ಕೆ 23 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ಕೋರಿ ಭರತ್ ಕುಮಾರ್ ಎನ್.ಎಂ. ಎಂಬ ಎಲೆಕ್ಟ್ರಿಕ್ ಕಾಮಗಾರಿಗಳ ಗುತ್ತಿಗೆದಾರ ಬೆಸ್ಕಾಂನ ಜಯನಗರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು 13 ಲಕ್ಷ ಲಂಚ ನೀಡುವಂತೆ ಧನಂಜಯ ಬೇಡಿಕೆ ಇಟ್ಟಿದ್ದರು. 3.5 ಲಕ್ಷವನ್ನು ಬುಧವಾರವೇ ತಲಪಿಸುವಂತೆ ಅರ್ಜಿದಾರರಿಗೆ ಸೂಚಿಸಿದ್ದರು.

ಈ ಕುರಿತು ಭರತ್ ಕುಮಾರ್ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರಿಗೆ ದೂರು ನೀಡಿದ್ದರು. ಬೆಸ್ಕಾಂನ ಜಯನಗರ ಉಪ ವಿಭಾಗದ ಕಚೇರಿಯಲ್ಲಿ ದೂರುದಾರರು ಲಂಚದ ಹಣದೊಂದಿಗೆ ಧನಂಜಯ ಅವರನ್ನು ಬುಧವಾರ ಸಂಜೆ 4 ಗಂಟೆಗೆ ಭೇಟಿಮಾಡಿದ್ದರು. ಲಂಚದ ಹಣವನ್ನು ಅಲ್ಲಿಯೇ ಇದ್ದ ಸೈಯದ್ ನಿಜಾಮ್ ಅವರಿಗೆ ತಲುಪಿಸುವಂತೆ ಅಧಿಕಾರಿ ಸೂಚಿಸಿದರು. ಅದರಂತೆಯೇ ಭರತ್ ಕುಮಾರ್ ಹಣವನ್ನು ನೀಡಿದರು. ತಕ್ಷಣ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಧನಂಜಯ ಮತ್ತು ಸೈಯದ್ ನಿಜಾಮ್ ಇಬ್ಬರನ್ನೂ ಬಂಧಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ಗಳಾದ ವೆಂಕಟೇಶ್ ಕೆ., ವಿಜಯಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
            
            
            An Assistant Executive Engineer of BESCOM and a middleman were arrested by Lokayukta officials on Wednesday while they were accepting bribes from an electricity contractor. The AEE, Dhananjaya, and the middleman, Sayid Nizam, were arrested from the BESCOM Sub division office in Jayanagar.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm