ಬ್ರೇಕಿಂಗ್ ನ್ಯೂಸ್
16-08-23 09:54 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕಟ್ಟಡವೊಂದಕ್ಕೆ 23 ಕಿಲೋವಾಟ್ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಲು 3.5 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಸ್–1 ಜಯನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಧನಂಜಯ ಮತ್ತು ಅವರ ಪರವಾಗಿ ಹಣ ಪಡೆದ ಸೈಯದ್ ನಿಜಾಮ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಟ್ಟಡವೊಂದಕ್ಕೆ 23 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ಕೋರಿ ಭರತ್ ಕುಮಾರ್ ಎನ್.ಎಂ. ಎಂಬ ಎಲೆಕ್ಟ್ರಿಕ್ ಕಾಮಗಾರಿಗಳ ಗುತ್ತಿಗೆದಾರ ಬೆಸ್ಕಾಂನ ಜಯನಗರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು 13 ಲಕ್ಷ ಲಂಚ ನೀಡುವಂತೆ ಧನಂಜಯ ಬೇಡಿಕೆ ಇಟ್ಟಿದ್ದರು. 3.5 ಲಕ್ಷವನ್ನು ಬುಧವಾರವೇ ತಲಪಿಸುವಂತೆ ಅರ್ಜಿದಾರರಿಗೆ ಸೂಚಿಸಿದ್ದರು.
ಈ ಕುರಿತು ಭರತ್ ಕುಮಾರ್ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರಿಗೆ ದೂರು ನೀಡಿದ್ದರು. ಬೆಸ್ಕಾಂನ ಜಯನಗರ ಉಪ ವಿಭಾಗದ ಕಚೇರಿಯಲ್ಲಿ ದೂರುದಾರರು ಲಂಚದ ಹಣದೊಂದಿಗೆ ಧನಂಜಯ ಅವರನ್ನು ಬುಧವಾರ ಸಂಜೆ 4 ಗಂಟೆಗೆ ಭೇಟಿಮಾಡಿದ್ದರು. ಲಂಚದ ಹಣವನ್ನು ಅಲ್ಲಿಯೇ ಇದ್ದ ಸೈಯದ್ ನಿಜಾಮ್ ಅವರಿಗೆ ತಲುಪಿಸುವಂತೆ ಅಧಿಕಾರಿ ಸೂಚಿಸಿದರು. ಅದರಂತೆಯೇ ಭರತ್ ಕುಮಾರ್ ಹಣವನ್ನು ನೀಡಿದರು. ತಕ್ಷಣ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಧನಂಜಯ ಮತ್ತು ಸೈಯದ್ ನಿಜಾಮ್ ಇಬ್ಬರನ್ನೂ ಬಂಧಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ಗಳಾದ ವೆಂಕಟೇಶ್ ಕೆ., ವಿಜಯಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An Assistant Executive Engineer of BESCOM and a middleman were arrested by Lokayukta officials on Wednesday while they were accepting bribes from an electricity contractor. The AEE, Dhananjaya, and the middleman, Sayid Nizam, were arrested from the BESCOM Sub division office in Jayanagar.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm