ಬ್ರೇಕಿಂಗ್ ನ್ಯೂಸ್
17-08-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ.
ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.
ಬೆಂಗಳೂರು ಎಪಿಎಂಸಿ ಘಟಕಕ್ಕೆ ತುಮಕೂರು, ರಾಮನಗರ ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರದಿಂದ ಬಾಳೆಹಣ್ಣು ಪೂರೈಕೆಯಾಗುತ್ತದೆ. ಹಾಗೆಯೇ ತಮಿಳುನಾಡಿಗೆ ಹೊಸೂರು ಹಾಗೂ ಕೃಷ್ಣಗಿರಿಯಿಂದ ಹಣ್ಣುಗಳು ಪೂರೈಕೆಯಾಗುತ್ತವೆ. ಹೊರರಾಜ್ಯಗಳಿಂದ ಪೂರೈಕೆ ಕಡಿಮೆ ಇರುವುದರಿಂದ ಏಲಕ್ಕಿ ಬಾಳೆಯ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 80 ರೂ ಇದ್ದರೆ ಪಚ್ಚಬಾಳೆ 20 ರೂ ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆ 100 ರಿಂದ 140 ರೂ ತಲುಪಿದೆ.
ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ ಹತ್ತಿರದಲ್ಲಿಯೇ ಇದ್ದರೂ ಅವರು ಬೆಳೆದಂತಹ ಉತ್ಪನ್ನಗಳು ನಗರ ತಲುಪುತ್ತಿಲ್ಲ. ಸಣ್ಣ ಹಿಡುವಳಿದಾರರು ಸಾಗಾಣಿಕಾ ವಾಹನ ಭರ್ತಿಯಾಗುವವರೆಗೂ ಕಾಯುತ್ತಿಲ್ಲ. ಬೇರೆ ಮಾರ್ಗವಿಲ್ಲದ ಕಾರಣ, ರೈತರು ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಓಣಂ, ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳು ಸಮೀಪಿಸುತ್ತಿದ್ದು ಬೇಡಿಕೆಯಲ್ಲಿಯೂ ಹೆಚ್ಚಳ ಕಂಡುಬರುತ್ತಿದೆ. ಬೆಲೆ ಏರಿಕೆಯ ಹಿಂದೆ ಮಧ್ಯವರ್ತಿಗಳ ಕೈವಾಡವಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಹೆಚ್ಚಾಗಿ ತಮಿಳುನಾಡಿನಿಂದ ಪೂರೈಕೆಯಗುತ್ತಿದ್ದ ಏಲಕ್ಕಿ ಬಾಳೆ, ಪಚ್ಚ ಬಾಳೆ ಹಣ್ಣಿಗೆ ಬೇಡಿಕೆಯಿದ್ದು, ಈ ಬಾರಿ ತಮಿಳುನಾಡಿನಿಂದ ಪೂರೈಕೆಯಾಗುವ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ಬೆಲೆ ಏರಿಕೆಗೆ ಕಾರಣ. ಈ ಮೊದಲು ಮಾರುಕಟ್ಟೆಗೆ ತಮಿಳುನಾಡಿನಿಂದ 1,500 ಕ್ವಿಂಟಲ್ ಬಾಳೆಹಣ್ಣುಗಳು ಪೂರೈಕೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 1,000 ಕ್ವಿಂಟಲ್ ಮಾತ್ರ ಪೂರೈಕೆಯಾಗಿದೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದರು.
Bannana price hiked to 140 per kilo in Karnataka after tomato price.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm