ಬ್ರೇಕಿಂಗ್ ನ್ಯೂಸ್
17-08-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ.
ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.
ಬೆಂಗಳೂರು ಎಪಿಎಂಸಿ ಘಟಕಕ್ಕೆ ತುಮಕೂರು, ರಾಮನಗರ ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರದಿಂದ ಬಾಳೆಹಣ್ಣು ಪೂರೈಕೆಯಾಗುತ್ತದೆ. ಹಾಗೆಯೇ ತಮಿಳುನಾಡಿಗೆ ಹೊಸೂರು ಹಾಗೂ ಕೃಷ್ಣಗಿರಿಯಿಂದ ಹಣ್ಣುಗಳು ಪೂರೈಕೆಯಾಗುತ್ತವೆ. ಹೊರರಾಜ್ಯಗಳಿಂದ ಪೂರೈಕೆ ಕಡಿಮೆ ಇರುವುದರಿಂದ ಏಲಕ್ಕಿ ಬಾಳೆಯ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 80 ರೂ ಇದ್ದರೆ ಪಚ್ಚಬಾಳೆ 20 ರೂ ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆ 100 ರಿಂದ 140 ರೂ ತಲುಪಿದೆ.
ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ ಹತ್ತಿರದಲ್ಲಿಯೇ ಇದ್ದರೂ ಅವರು ಬೆಳೆದಂತಹ ಉತ್ಪನ್ನಗಳು ನಗರ ತಲುಪುತ್ತಿಲ್ಲ. ಸಣ್ಣ ಹಿಡುವಳಿದಾರರು ಸಾಗಾಣಿಕಾ ವಾಹನ ಭರ್ತಿಯಾಗುವವರೆಗೂ ಕಾಯುತ್ತಿಲ್ಲ. ಬೇರೆ ಮಾರ್ಗವಿಲ್ಲದ ಕಾರಣ, ರೈತರು ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಓಣಂ, ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳು ಸಮೀಪಿಸುತ್ತಿದ್ದು ಬೇಡಿಕೆಯಲ್ಲಿಯೂ ಹೆಚ್ಚಳ ಕಂಡುಬರುತ್ತಿದೆ. ಬೆಲೆ ಏರಿಕೆಯ ಹಿಂದೆ ಮಧ್ಯವರ್ತಿಗಳ ಕೈವಾಡವಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಹೆಚ್ಚಾಗಿ ತಮಿಳುನಾಡಿನಿಂದ ಪೂರೈಕೆಯಗುತ್ತಿದ್ದ ಏಲಕ್ಕಿ ಬಾಳೆ, ಪಚ್ಚ ಬಾಳೆ ಹಣ್ಣಿಗೆ ಬೇಡಿಕೆಯಿದ್ದು, ಈ ಬಾರಿ ತಮಿಳುನಾಡಿನಿಂದ ಪೂರೈಕೆಯಾಗುವ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ಬೆಲೆ ಏರಿಕೆಗೆ ಕಾರಣ. ಈ ಮೊದಲು ಮಾರುಕಟ್ಟೆಗೆ ತಮಿಳುನಾಡಿನಿಂದ 1,500 ಕ್ವಿಂಟಲ್ ಬಾಳೆಹಣ್ಣುಗಳು ಪೂರೈಕೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 1,000 ಕ್ವಿಂಟಲ್ ಮಾತ್ರ ಪೂರೈಕೆಯಾಗಿದೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದರು.
Bannana price hiked to 140 per kilo in Karnataka after tomato price.
15-02-26 10:22 am
HK News Staffer
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am