ಬ್ರೇಕಿಂಗ್ ನ್ಯೂಸ್
19-08-23 04:30 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆಯ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಕೊಲೆ ಪ್ರಕರಣವು ಕಾನೂನು ನೆಲೆಯಲ್ಲಿ ಪೂರ್ಣಗೊಂಡಿದೆ. ಮರು ತನಿಖೆ ಆಗಬೇಕು ಎನ್ನುವುದು ಸಾರ್ವಜನಿಕರ ಆಗ್ರಹ. ಸಾರ್ವಜನಿಕ ವಲಯದಲ್ಲಿ ಪರ- ವಿರೋಧ ಇದ್ದೇ ಇರುತ್ತದೆ. ಸದ್ಯಕ್ಕೆ ಈ ಪ್ರಕರಣ ಮುಗಿದ ಅಧ್ಯಾಯ. ಸರಕಾರ ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಪಿಎಸ್ಐ ನೇಮಕಾತಿ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆ ನಡೆಸಬಾರದು ಎಂದು ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸರಕಾರ ಈ ಬಗ್ಗೆ ತನ್ನ ನಿಲುವು ತಿಳಿಸುವಂತೆ ನ್ಯಾಯಾಲಯ ಹೇಳಿತ್ತು. ನಾವು ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದೇವೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸೌಜನ್ಯಾ ಕೊಲೆ ಪ್ರಕರಣದಲ್ಲಿ ರಾಜ್ಯದೆಲ್ಲೆಡೆ ಪ್ರತಿಭಟನೆ, ಮರು ತನಿಖೆಯಾಗಬೇಕೆಂದು ಆಗ್ರಹ ಕೇಳಿಬರುತ್ತಿದ್ದರೂ, ಆ ಬಗ್ಗೆ ನಿರ್ಲಕ್ಷ್ಯ ಸೂಚಿಸುವ ರೀತಿ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರಕರಣ ಮುಗಿದು ಹೋದ ಅಧ್ಯಾಯ ಎನ್ನುವ ಮೂಲಕ ಮರು ತನಿಖೆಗೆ ಆದೇಶ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ದಿನಕ್ಕೊಂದು ಕಡೆ ಪ್ರತಿಭಟನೆ ನಡೆಯುತ್ತಿದ್ದರೂ, ಮರು ತನಿಖೆ ಆಗಬೇಕೆಂದು ಬೆಳ್ತಂಗಡಿಯ ಹಾಲಿ ಶಾಸಕರು, ಮಾಜಿ ಶಾಸಕರು, ಧರ್ಮಸ್ಥಳದ ಕಡೆಯವರೆಲ್ಲ ಆಗ್ರಹ ಮಾಡಿದರೂ ಕಾಂಗ್ರೆಸ್ ಸರ್ಕಾರ ಮಾತ್ರ ನಗಣ್ಯ ಮಾಡಿರುವುದು ಕುತೂಹಲ ಮೂಡಿಸಿದೆ.
No reinvestigation of Sowjanya murder and rape case says home minister Parmeshwar.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm