ಬ್ರೇಕಿಂಗ್ ನ್ಯೂಸ್
19-08-23 07:38 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 19: ದಾವಣೆಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಅವರ ಪತ್ನಿ ಪ್ರತಿಭಾ ಹೊನ್ನಾಳ(35), ಅವರ ಪುತ್ರ ಯಶ್ ಹೊನ್ನಾಳ(06) ಎಂದು ಗುರುತಿಸಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯೋಗೇಶ್-ಪ್ರತಿಭಾ ದಂಪತಿಗೆ 9 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ದಂಪತಿಗೆ ಆರು ವರ್ಷದ ಪುತ್ರನಿದ್ದಾನೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದೆ ಇದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಗಳ ಯೋಗಕ್ಷೇಮ ವಿಚಾರಿಸಲೆಂದು ಅವರ ಮನೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಯಾರು ಕರೆಯನ್ನು ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ ಅವರ ಸಹೋದರನಿಗೆ ವಿಷಯವನ್ನು ತಿಳಿಸಿದ್ದಾರೆ.
ಮೂವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಿಸಿಕೊಡುವಂತೆ ಯೋಗೇಶ್ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Davanagere Techie couple along with six year old son found dead at America.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm