ಬ್ರೇಕಿಂಗ್ ನ್ಯೂಸ್
19-08-23 07:38 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 19: ದಾವಣೆಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಅವರ ಪತ್ನಿ ಪ್ರತಿಭಾ ಹೊನ್ನಾಳ(35), ಅವರ ಪುತ್ರ ಯಶ್ ಹೊನ್ನಾಳ(06) ಎಂದು ಗುರುತಿಸಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯೋಗೇಶ್-ಪ್ರತಿಭಾ ದಂಪತಿಗೆ 9 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ದಂಪತಿಗೆ ಆರು ವರ್ಷದ ಪುತ್ರನಿದ್ದಾನೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದೆ ಇದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಗಳ ಯೋಗಕ್ಷೇಮ ವಿಚಾರಿಸಲೆಂದು ಅವರ ಮನೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಯಾರು ಕರೆಯನ್ನು ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ ಅವರ ಸಹೋದರನಿಗೆ ವಿಷಯವನ್ನು ತಿಳಿಸಿದ್ದಾರೆ.
ಮೂವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಿಸಿಕೊಡುವಂತೆ ಯೋಗೇಶ್ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Davanagere Techie couple along with six year old son found dead at America.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm