ಬ್ರೇಕಿಂಗ್ ನ್ಯೂಸ್
21-08-23 08:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ಮದ್ಯದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಿದ್ದರು. ಆದರೆ ದರ ಏರಿಕೆಯ ಬೆನ್ನಲ್ಲೇ ಮದ್ಯಪ್ರಿಯರು ಕುಡಿಯುವ ಪ್ರಮಾಣವನ್ನೇ ಕಡಿಮೆ ಮಾಡಿದ್ದು ಸರ್ಕಾಕ್ಕೆ ಶಾಕ್ ನೀಡಿದ್ದಾರೆ.
ರಾಜ್ಯ ಸರಕಾರ ಜುಲೈ ತಿಂಗಳಲ್ಲಿ ಮದ್ಯ ಹಾಗೂ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿತ್ತು. ಈ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಸುಲಭವಾಗಿ ಹಣ ಹೊಂದಾಣಿಕೆ ಮಾಡಲು ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿತ್ತು. ಆದರೆ ಮದ್ಯಪ್ರಿಯರು ಕುಡಿಯುವ ಪ್ರಮಾಣವನ್ನೇ ಕಡಿಮೆ ಮಾಡಿದ್ದು ಸರ್ಕಾರಕ್ಕೆ ಶಾಕ್ ಕೊಟ್ಟಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣವೇ ಶೇ.15ರಷ್ಟು ಕುಸಿತ ಕಂಡಿದೆ. ಹೆಚ್ಚು ಬಿಕರಿಯಾಗುತ್ತಿದ್ದ ಬಿಯರ್ ಮಾರಾಟದಲ್ಲೂ ದಿಢೀರ್ ಕುಸಿತವಾಗಿದೆ. ಮದ್ಯ ಮಾರಾಟದಿಂದ ಪ್ರತಿ ತಿಂಗಳು 2,500 ಕೋಟಿ ರೂ. ಬರುತ್ತಿದ್ದ ಆದಾಯ ಆಗಸ್ಟ್ ತಿಂಗಳಲ್ಲಿ 962 ಕೋಟಿ ರೂ.ಗೆ ಕುಸಿದಿದೆ. ಅಬಕಾರಿ ಸುಂಕ ಹೆಚ್ಚಳ ಆಗುತ್ತಿದ್ದಂತೆ ಬಾರ್, ಚಿಲ್ಲರೆ ಮದ್ಯದ ಅಂಗಡಿಗಳಲ್ಲಿ ಮಾರಾಟ ಕುಸಿದಿದ್ದು ಮದ್ಯ ಪ್ರಿಯರೇ ಕುಡಿಯುವುದನ್ನು ಕಡಿಮೆ ಮಾಡಿರುವುದು ಕಂಡುಬಂದಿದೆ.
ಇದೇ ವೇಳೆ, ಬೆಲೆ ಏರಿಕೆ ಪರಿಣಾಮ ಕಡಿಮೆ ಬೆಲೆಯ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದೆ. ಸ್ಕಾಚ್ ಕುಡಿಯುತ್ತಿದ್ದ ಸಿರಿವಂತರು ಪ್ರೀಮಿಯಮ್ ಬ್ರ್ಯಾಂಡ್ಗೆ ಶಿಫ್ಟ್ ಆಗಿದ್ದರೆ, ಪ್ರೀಮಿಯಮ್ ಬ್ರಾಂಡ್ನವರು ನಾರ್ಮಲ್ ಬ್ರ್ಯಾಂಡ್ಗೆ ಶಿಫ್ಟ್ ಆಗಿದ್ದಾರೆ. ಇದರಿಂದ ಸರ್ಕಾರದ ಆದಾಯ ಸಂಗ್ರಹದ ಮೇಲೂ ವ್ಯತಿರಿಕ್ತ ಪರಿಣಾಮ ಆಗಿದೆ.
ಹೀಗಾಗಿ ರಾಜ್ಯ ಪಾನೀಯ ನಿಗಮಕ್ಕೆ ಸಗಟು ವ್ಯಾಪಾರಿಗಳು ಮದ್ಯಕ್ಕಾಗಿ ಸಲ್ಲಿಸುವ ಖರೀದಿ ಬೇಡಿಕೆಯೂ ಒಟ್ಟಾರೆ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಮದ್ಯ ಮಾರಾಟ ಶೇ.15ರಷ್ಟು ಕುಸಿತವಾಗಿದ್ದರೆ, ಬಿಯರ್ ಶೇ.5ರಷ್ಟು ಕುಸಿದಿದೆ. ಇದು ಸರಕಾರದ ಆದಾಯ ಸಂಗ್ರಹದ ಮೇಲೆ ತೀವ್ರ ಪರಿಣಾಮ ಬೀರಿದ್ದು ಸರ್ಕಾರದ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ತೊಡಕಾಗಲಿದೆ.
The state government has increased the price of liquor to accumulate funds for the guarantee schemes that were announced by it as it assumed power. However, the liquor buyers have shocked the government by not buying liquor in quantities that was expected.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm